ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸುಮನ್ ಕುಲಕರ್ಣಿ-ಭಗವದ್ಗೀತೆ, ಕುಮಾರಿ ವೈನಾ ಮಕಾನದಾರ–ಕುರಾನ್, ಅಲ್ವಿದಾ ದಲಭಂಜನ-ಬೈಬಲ್ ಪಠಿಸುವುದರ ಮೂಲಕ ಸರ್ವಧರ್ಮ ಪ್ರಾರ್ಥನೆ ಪ್ರಸ್ತುತಪಡಿಸಿದರು.