HomeGadag News17ನೇ ರಾಷ್ಟ್ರೀಯ ಸೈಕ್ಲಿಂಗ್ ಕ್ರೀಡಾಕೂಟ: ಮೊದಲ ದಿನವೇ ಗದುಗಿನ ಕುವರಿಗೆ ಕಂಚಿನ ಪದಕ

17ನೇ ರಾಷ್ಟ್ರೀಯ ಸೈಕ್ಲಿಂಗ್ ಕ್ರೀಡಾಕೂಟ: ಮೊದಲ ದಿನವೇ ಗದುಗಿನ ಕುವರಿಗೆ ಕಂಚಿನ ಪದಕ

Spread the love

ವಿಜಯಸಾಕ್ಷಿ ಸುದ್ದಿ, ಗದಗ

17ನೇ ರಾಷ್ಟ್ರೀಯ ಸೀನಿಯರ್, ಜ್ಯೂನೀಯರ್ ಮತ್ತು ಸಬ್ ಜ್ಯೂನಿಯರ್ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟ ಸ್ಪರ್ಧೆಗಳು ಶುಕ್ರವಾರ ತಾಲೂಕಿನ ಬಿಂಕದಕಟ್ಟಿ ಗ್ರಾಮದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಜರುಗಿದವು.

ಕ್ರೀಡಾಕೂಟದ ಮೊದಲ ದಿನವಾದ ಶುಕ್ರವಾರದಂದು 14 ಮತ್ತು 16 ವರ್ಷದ ಬಾಲಕ ಮತ್ತು ಬಾಲಕಿಯರಿಗಾಗಿ ವೈಯಕ್ತಿಕ ಟಾಯ್ ಟ್ರಾಯಲ್‌ನ 10 ಕಿಮೀ 4 ಸುತ್ತುಗಳ ಸೈಕಲ್ ಓಟದ ಸ್ಪರ್ಧೆ ನಡೆಯಿತು. ಅದರಂತೆ, 18 ವರ್ಷದ ಬಾಲಕರಿಗಾಗಿ ವೈಯಕ್ತಿಕ ಟಾಯ್ ಟ್ರಾಯಲ್‌ನ 18.4 ಕಿಮೀ 4 ಸುತ್ತುಗಳ ಸೈಕಲ್ ಓಟದ ಸ್ಪರ್ಧೆಗಳು ಜರುಗಿದವು.

16 ವರ್ಷದ ಬಾಲಕಿಯರಿಗಾಗಿ ನಡೆದ ವೈಯಕ್ತಿಕ ಟಾಯ್ ಟ್ರಾಯಲ್‌ನ 10 ಕಿ.ಮೀ.ನ 4 ಸುತ್ತುಗಳ ಸೈಕಲ್ ಓಟದ ಸ್ಪರ್ಧೆಯಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಕು.ಪವಿತ್ರಾ ಕುರ್ತಕೋಟಿ (41ನಿ.4ಸೆ) ನಲ್ಲಿ ಗುರಿ ಮುಟ್ಟುವ ಮೂಲಕ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.

14 ವರ್ಷದವರ ವಿಭಾಗ

ಮಹಾರಾಷ್ಟ್ರದ ಅದೀಪ ವಘಾ(ಪ್ರಥಮ), ಕರ್ನಾಟಕದ ಸಮರಪನ ಜೈನ್(ದ್ವಿತೀಯ), ಅಸ್ಸಾಂನ ಮಲವ ದತ್ತಾ(ತೃತೀಯ), ಬಾಲಕಿಯರ ವಿಭಾಗದಲ್ಲಿ ಮಹಾರಾಷ್ಟ್ರದ ಸಿದ್ಧಿ ಸಿರ್ಕೇ(ಪ್ರಥಮ), ಶರವನಿ ಪರಿತ್(ದ್ವಿತೀಯ), ಕರ್ನಾಟಕದ ಚಾಯಾ ನಾಗಶೆಟ್ಟಿ (ತೃತೀಯ) ಸ್ಥಾನ ಪಡೆದಿದ್ದಾರೆ.

16 ವರ್ಷದವರ ವಿಭಾಗ

ಬಾಲಕಿಯರ ವಿಭಾಗದಲ್ಲಿ ಕರ್ನಾಟಕದ ಕರಿನ್ ಮರ್ಶಲ್ (ಪ್ರಥಮ), ಕೇರಳದ ಅಗಸಾ ಅನ್ನ ಥೊಮಸ್(ದ್ವಿತೀಯ), ಕರ್ನಾಟಕದ ಪವಿತ್ರಾ ಕುರ್ತಕೋಟಿ (ತೃತೀಯ), ಬಾಲಕರ ವಿಭಾಗದಲ್ಲಿ
ಕರ್ನಾಟಕದ ಚರತಗೌಡ (ಪ್ರಥಮ), ಕೇರಳದ ಅದ್ವೈತ್ ಸನ್ಕರ್(ದ್ವಿತೀಯ), ಪಶ್ಚಿಮ ಬಂಗಾಳದ ಸುಧನಸು ಲಿಮಬು (ತೃತೀಯ) ಸ್ಥಾನ ಪಡೆದಿದ್ದಾರೆ.

18 ವರ್ಷದವರ ವಿಭಾಗ

ಬಾಲಕರ ವಿಭಾಗದಲ್ಲಿ ಕರ್ನಾಟಕದ ಅಡೋನಿಸ್ ತನಗ್ಪು (ಪ್ರಥಮ), ಹರ್ಶಿತ ಕೆ.ಜೆ.(ದ್ವಿತೀಯ) ಹಾಗೂ ಪ.ಬಂಗಾಳದ ರಾಜಕುಮಾರ ರಾಯ್ (ತೃತೀಯ) ಸ್ಥಾನ ಪಡೆದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!