ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ
ಚಿಕ್ಕನರಗುಂದ ಗ್ರಾಮದ ಅಭಿವೃದ್ಧಿಗಾಗಿ 2 ಕೋಟಿ 12 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಲೋಕೋಪಯೋಗಿ ಖಾತೆ ಸಚಿವ ಸಿ ಸಿ ಪಾಟೀಲ ಇತ್ತೀಚೆಗೆ ಚಾಲನೆ ನೀಡಿದರು.

ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ 1 ಕೋಟಿ 82 ಲಕ್ಷ ರೂ, ಸಮಾಜ ಕಲ್ಯಾಣ ಇಲಾಖೆಯಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ 20 ಲಕ್ಷ ರೂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 5 ಲಕ್ಷ ರೂ ಹಾಗೂ ಉದ್ಯೋಗ ಖಾತರಿ ಯೋಜನೆಯ 5 ಲಕ್ಷ ರೂ ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮುತ್ತು ರಾಯರೆಡ್ಡಿ, ಸದಸ್ಯರಾದ ಶರಣಬಸಪ್ಪ ಹಳೇಮನಿ, ಬಾಪುಗೌಡ ಹಿರೇಗೌಡ್ರ, ಲಕ್ಷ್ಮಣ ಕಂಬಳಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ, ಶೋಭಾ ಕೋಣನ್ನವರ, ಶಂಕ್ರಮ್ಮ ಚಲವಾದಿ, ಪಿಡಿಓ ಶೈನಾಜ್ ಮುಜಾವರ್,

ಹಿರಿಯರಾದ ಅಶೋಕ ಸಾಲೂಟಗಿ, ಬಸನಗೌಡ ಮುದಿಗೌಡ್ರ, ಈರಣ್ಣ ಹೊಂಗಲ್, ಸುರೇಶ್ ಸಾತಣ್ಣವರ್, ಅಡಿವೆಪ್ಪ ಮರಿಯಣ್ಣವರ, ಚನ್ನಪ್ಪ ಬ್ಯಾಳಿ, ಬಿ ಸಿ ಹನಮಂತಗೌಡ್ರ, ಬಸು ಕೊಣನ್ನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
