2016-18: 3,005 ಯುಎಪಿಎ ಕೇಸು, ಶೇ.27 ರಲ್ಲಿ ಮಾತ್ರ ಚಾರ್ಜ್ ಶೀಟ್!

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಕುರಿತ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಕೇಂದ್ರ ನೀಡಿದ ಉತ್ತರದಿಂದ, ಒಂದಿಷ್ಟು ಅಂಶಗಳು ಸ್ಪಷ್ಟವಾಗುತ್ತವೆ. 2016ರಿಂಷ ವ್ಯಾಪಕವಾಗಿ ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ಬಳಸುತ್ತಿದೆ. ಈ ಕೇಸುಗಳಲ್ಲಿ ತನಿಖೆ ಪೂರ್ಣಗೊಂಡಿರುವ ಕೇಸುಗಳು ತುಂಬ ವಿರಳ. ಇದರರ್ಥ ಆರೋಪಿಗಳಿಗೆ ಜಾಮೀನು ಸಿಗದೆ ಅವರು ಜೈಲಿನಲ್ಲೇ ಇರುವಂತೆ ಮಾಡುವ ತಂತ್ರವನ್ನು ಸರ್ಕಾರ ಅನುಸರಿಸುತ್ತಿದೆಯೇ ಎಂಬ ಅನುಮಾನ ಮೂಡುತ್ತದೆ.

ಸರ್ಕಾರವೇ ನೀಡಿದ ಮಾಹಿತಿ ಪ್ರಕಾರ, 2016-18ರ ಅವಧಿಯಲ್ಲಿ 3,005 ಯುಪಿಎ ಕೇಸು ದಾಖಲಾಗಿದ್ದು, ಅದರಲ್ಲಿ ಕೇವಲ 821 ಕೇಸುಗಳಲ್ಲಿ ಮಾತ್ರ ಚಾರ್ಜ್ ಶೀಟ್ ಸಲ್ಲಿಸಲು ಸಾಧ್ಯವಾಗಿದೆ. ಅಂದರೆ ಶೇ.27 ಪ್ರಕರಣಗಳಲ್ಲಿ ಮಾತ್ರ ತನಿಖೆ ಮುಗಿದಿದೆ!

ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ, 2017-18ರಲ್ಲಿ 1,198 ಪ್ರಕರಣ ದಾಖಲಿಸಿದ್ದು 563 ಆರೋಪಿಗಳು ಇನ್ನೂ ಜೈಲಿನಲ್ಲಿದ್ದಾರೆ. ಅರ್ಧಕ್ಕೂ ಹೆಚ್ಚು ಜನ ಆರೋಪಮುಕ್ತರಾಗಿದ್ದಾರೆ ಎಂದರೆ ಆಧಾರರಹಿತ ಕೇಸುಗಳನ್ನು ಹಾಕಲಾಗಿತ್ತು ಎಂದೇ ಅರ್ಥ.

ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಅತಿ ಹೆಚ್ಚು ಎನ್‌ಎಸ್‌ಎ ಪ್ರಕರಣ ದಾಖಲಾಗಿವೆ. ಈ ಎರಡು ರಾಜ್ಯಗಳಲ್ಲಂತೂ ಸಾಮಾನ್ಯ ಪ್ರಕರಣಗಳಲ್ಲೂ ಭಯೋತ್ಪದನಾ ಚಟುವಟಿಕೆಗೆ ಸಂಬಂಧಿಸಿದ ಕಾಯ್ದೆ ಅಡಿ ಕೇಸು ದಾಖಲಿಸುವುದು ಸಾಮಾನ್ಯವಾಗಿ ಬಿಟ್ಟಿದೆ.

ಯುಎಪಿಎ, ಎನ್‌ಎಸ್‌ಎ ದುರುಪಯೋಗ?

ಸರ್ಕಾರ ನೀಡಿದ ಅಂಕಿಅಂಶಗಳು ಮತ್ತು ಈಗ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ, ಈ ಎರಡೂ ಕಾಯ್ದೆಗಳನ್ನು ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿರುವುದು ಕಾಣುತ್ತದೆ. ಇವೆರಡೂ ಕಾಯ್ದೆಗಳು ಭಯೋತ್ಪಾದನೆ ಮತ್ತು ತೀರಾ ಗಂಭಿರ ಪ್ರಕರಣಗಳನ್ನು ಭೇದಿಸಲೆಂದು ರೂಪಿತವಾಗಿವೆ.
ಭಾಷಣವೊಂದರ ಆಧಾರದಲ್ಲಿ (ಅದನ್ನು ತಪ್ಪಾಗಿ ಉಲ್ಲೇಖಿಸಿ) ಡಾ. ಕಫೀಲ್ ಖಾನ್‌ರನ್ನು ಎನ್‌ಎಸ್‌ಎ ಅಡಿ ಬಂಧಿಸಲಾಗಿತ್ತು. ಕೊನೆಗೆ ಕೋರ್ಟ್ ಅವರನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಬೇಕಾಯಿತು. ಭೀಮಾ-ಕೋರೆಗಾಂವ್ ಪ್ರಕರಣದಲ್ಲಿ ಪ್ರಭುತ್ವವನ್ನು ಟೀಕಿಸುವ ಪ್ರಗತಿಪರರ ಮೇಲೆ ಎನ್‌ಎಸ್‌ಎ ಕಾಯ್ದೆ ಮತ್ತು ದೆಹಲಿ ಗಲಭೆ ಪ್ರಕರಣದಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿ ಹೋರಾಟಗಾರರ ಮೇಲೆ ಯುಎಪಿಎ ಅಡಿ ಪ್ರಕರಣ ದಾಖಲಿಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here