ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಆಕ್ಸಿಜನ್ ಕೊರತೆಯಿಂದಾಗಿ ಚಾಮರಾಜನಗರದಲ್ಲಿ ಸಾವನ್ನಪ್ಪಿರುವ 24 ಜನರ ಸಾವಿಗೆ ಸರ್ಕಾರವೇ ನೇರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಾಮಾರಿಯಿಂದಾಗಿ ಕಂಗಾಲಾಗಿದ್ದಾರೆ. ಸದ್ಯದ ಈ ಸ್ಥಿತಿಗೆ ಬಿಜೆಪಿ ಸರ್ಕಾರವೇ ಕಾರಣ.ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಜನರ ಕೊಲೆಗೆ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.
ಈ ಸಾವಿನ ಹೊಣೆ ಯಾರು ಹೊತ್ತಿಕೊಳ್ಳುತ್ತಾರೆ? ಎಂದು ಪ್ರಶ್ನಿಸಿದ ಅವರು, ಸರ್ಕಾರ ಈ ವಿಷಯವಾಗಿ ಮಿಸ್ ಗೈಡ್ ಮಾಡುವ ಕಾರ್ಯ ಮಾಡುತ್ತಿದೆ. 24 ಜನ ಸತ್ತಿದ್ದಕ್ಕೆ ಸರ್ಕಾರವೇ ಹೊಣೆ ಹೊರಬೇಕು ಎಂದು ನ್ಯಾಯಮೂರ್ತಿಗಳೇ ಗರಂ ಆಗಿದ್ದಾರೆ.
ಜನ ಬೀದಿಗೆ ಬಂದಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು. ಪ್ರತಿ ಬಡ ಕುಟುಂಬಕ್ಕೆ ರೂ. 10 ಸಾವಿರ ಆರ್ಥಿಕ ನೆರವು ಘೋಷಿಸಬೇಕು. ಬ್ಯಾಂಕ್ ಗಳ ಸಭೆ ಕರೆಯಬೇಕು. ಇಎಂಐ ಹಾಗೂ ಬಡ್ಡಿ ವಿಚಾರದಲ್ಲಿ ಬ್ಯಾಂಕ್ ಗಳ ಜೊತೆ ಮಾತನಾಡಿ, ಜನರ ನೆರವಿಗೆ ನಿಲ್ಲಬೇಕು ಎಂದು ಹೇಳಿದ್ದಾರೆ.