HomeKarnataka Newsಝೀರೋ ಟ್ರಾಫಿಕ್‌ನಲ್ಲೂ ಉಳಿಯಲಿಲ್ಲ 4 ತಿಂಗಳ ಕಂದಮ್ಮ; ಶ್ವಾಸಕೋಶ ಸೋಂಕಿಗೆ ಮಗು ಬಲಿ!

ಝೀರೋ ಟ್ರಾಫಿಕ್‌ನಲ್ಲೂ ಉಳಿಯಲಿಲ್ಲ 4 ತಿಂಗಳ ಕಂದಮ್ಮ; ಶ್ವಾಸಕೋಶ ಸೋಂಕಿಗೆ ಮಗು ಬಲಿ!

For Dai;y Updates Join Our whatsapp Group

ದಾವಣಗೆರೆ: ಅಂಬುಲೆನ್ಸ್‌ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ತುರ್ತಾಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಯತ್ನ ಫಲಿಸದೆ, ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಹಸುಗೂಸು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಂಡಿ ಗ್ರಾಮದ ಹನುಮೇಶ್ ಹಾಗೂ ಪವಿತ್ರಾ ದಂಪತಿಯ ಹೆಣ್ಣು ಮಗು ಮೃತಪಟ್ಟಿದೆ. ಮೂರು ತಿಂಗಳ ಹಿಂದೆ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಪವಿತ್ರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ಕೆಲವು ದಿನಗಳಿಂದ ಮಗು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿತ್ತು.

ಕಳೆದ ಒಂದು ವಾರದಿಂದ ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ವೈದ್ಯರು ಸಲಹೆ ನೀಡಿದ್ದರು.

ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಂಬುಲೆನ್ಸ್‌ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ದಾರಿ ಮಧ್ಯೆ ಹೊನ್ನಾಳಿ ತಾಲೂಕಿನ ಹೆಚ್. ಕಡದಕಟ್ಟೆ ಬಳಿ ಅಂಬುಲೆನ್ಸ್‌ನ ಟೈರ್ ಪಂಕ್ಚರ್ ಆಗಿದ್ದು, ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮಗುವಿನ ಜೀವ ಉಳಿಸಲು ಪೋಷಕರು, ಪೊಲೀಸರು ಹಾಗೂ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾದರು. ಹೊನ್ನಾಳಿ ಸಿಪಿಐ ಸುನೀಲ್ ಕುಮಾರ್ ಹಾಗೂ ಸ್ಥಳೀಯರ ಸಹಕಾರದಿಂದ ಅಂಬುಲೆನ್ಸ್ ಟೈರ್ ಬದಲಾಯಿಸಲಾಯಿತು. ಬಳಿಕ ಮಗುವಿನ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ, ಪೊಲೀಸರ ಹಾಗೂ ವೈದ್ಯರ ಸತತ ಪ್ರಯತ್ನದ ನಡುವೆಯೂ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಹಸುಗೂಸನ್ನು ಉಳಿಸಲು ನಡೆಸಿದ ಪ್ರಯತ್ನಗಳ ನಡುವೆಯೇ ನಡೆದ ಈ ಘಟನೆ ಪೋಷಕರಲ್ಲಿ ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img