



ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಪಂಚಮಸಾಲಿ ಸಮಾಜದ 4 ನೇ ಪೀಠ ಸ್ಥಾಪನೆಗೆ ಕೊಪ್ಪಳದಲ್ಲಿ ಸದ್ದಿಲ್ಲದೆ ಸಿದ್ಧತೆ ನೆಡದಿದೆ. ಮೂರನೇ ಪೀಠ ಚರ್ಚೆ ಎನ್ನುತಿದ್ದಂತೆ ಇದೀಗ ನಾಲ್ಕನೇ ಪೀಠದ ಸರದಿ ಪ್ರಾರಂಭವಾಗಿದೆ. ರಾಜ್ಯದಲ್ಲೇ ಪ್ರಥಮ ಭಾರಿಗೆ ಕೊಪ್ಪಳ ಜಿಲ್ಲೆಯಲ್ಲಿ ಪಂಚಮಸಾಲಿಯ ನಾಲ್ಕನೇ ಪೀಠದ ಮೊದಲ ಸಭೆ ನೆಡಸಲು ಇದೀಗ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.
ಇನ್ನೂ ನಾಲ್ಕನೆ ಪೀಠ ವಿಶೇಷವಾಗಿ ಪಂಚಮಸಾಲಿ ಸಮಾಜದ ಮಹಿಳಾ ಪೀಠವಾಗಬೇಕು ಎನ್ನುವುದು ಸಮಾಜದ ಮಹಿಳೆಯರ ಕೂಗು ಕೇಳಿ ಬರ್ತಿದೆ. ಸುಮಾರು 40 ಲಕ್ಷ ಮಹಿಳೆಯರನ್ನು ಹೊಂದಿದ ಪಂಚಮಸಾಲಿ ಸಮಾಜಕ್ಕೆ ಪ್ರತ್ಯೇಕ ಮಹಿಳಾ ಪೀಠ ಆಗಬೇಕು ಎಂದು
ಪಂಚಮಸಾಲಿ ಮಹಾಸಭಾ ರಾಜ್ಯ ಉಪಾಧ್ಯಕ್ಷೆ ಕಿಶೋರಿ ಬುದನೂರ ರಿಂದ ಮಹಿಳಾ ಪೀಠದ ಸ್ಥಾಪನೆಗೆ ಒತ್ತಾಯಿಸಿದ್ದಾರೆ. ಹೆಸರಿಗೆ ಮಾತ್ರ ಕಿತ್ತೂರು ಚೆನ್ನಮ್ಮ ಅಂತಾರೆ ಆದರೆ ಈಗಿರುವ ಎರಡೂ ಪೀಠದಿಂದ ಸಮಾಜದ ಮಹಿಳೆಯರ ಅಭಿವೃದ್ಧಿ ಆಗಿಲ್ಲ ಸಮಾಜದ ಒಕ್ಕೂಟದಲ್ಲಿ 11 ಜನ ಮಹಿಳೆಯರಿದ್ದಾರೆ ಅದರಲ್ಲಿ ಒಬ್ಬರನ್ನು ಮಹಿಳಾ ಪೀಠದ ಪೀಠಾಧಿತಿ ಮಾಡಲಾಗುವುದು ಮಹಿಳಾ ಪೀಠದ ಸ್ಥಾಪನೆ ಬಗ್ಗೆ ಈಗಾಗಲೇ ಒಂದು ಸಭೆ ಮಾಡಲಾಗಿದೆ. ಮಹಿಳಾ ಪೀಠದ ಕುರಿತು ಕೂಡಲಸಂಗಮ, ಹರಿಹರ ಪೀಠದ ಸ್ವಾಮೀಜಿಗಳ ಗಮನಕ್ಕೆ ತರಲಾಗಿದೆ ಸಮಾಜದ ಮೂರು ಪೀಠಗಳು ಮಹಿಳಾ ಪೀಠದ ಸ್ಥಾಪನೆಗೆ ಒಪ್ಪಿಗೆ ಸೂಚಿಸುತ್ತಾರೆ ಯಾವುದೇ ಕಾರಣಕ್ಕೂ ಮಹಿಳಾ ಪೀಠ ಸ್ಥಾಪನೆ ವಿಷಯ ಕೈ ಬಿಡುವುದಿಲ್ಲ ಮಹಿಳಾ ಪೀಠ ಸ್ಥಾಪನೆ ಮಾಡಿಯೇ ಮಾಡುತ್ತೇವೆ ಎಂದು ಕಿಶೋರಿ ಬುದನೂರ ಹೇಳಿದ್ದಾರೆ.