HomeGadag News5ಲಕ್ಷ ರೂ, ವೆಚ್ಚದ ಉದ್ಯೋಗ ಖಾತ್ರಿ ಯೋಜನೆಗೆ ಗ್ರಾ.ಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ

5ಲಕ್ಷ ರೂ, ವೆಚ್ಚದ ಉದ್ಯೋಗ ಖಾತ್ರಿ ಯೋಜನೆಗೆ ಗ್ರಾ.ಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ನರಗುಂದ

5 ಲಕ್ಷ, ರೂಗಳ ಉದ್ಯೋಗ ಖಾತ್ರಿ ಯೋಜನೇಯ ಅಡಿಯಲ್ಲಿ ನ. ಶಾ.ಕಾ. 12ನೇ ಬ್ಲಾಕ್‌ ನ 1 ಆರ್ ಕಾಲುವೆಯ ಹೂಳು ಎತ್ತುವ ಕೆಲಸಕ್ಕೆ ಚಿಕ್ಕ ನರಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು ಪಾಲ್ಗೊಂಡು ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕೋವಿಡ್- 19 ಎರಡನೇ ಅಲೆ ಅತಿ ವೇಗವಾಗಿ ಜನರು ಸರಕಾರದ ಮಾರ್ಗಸೂಚಿ ಪಾಲಿಸಬೇಕು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದರು.

ಅನಗತ್ಯ ಸಂಚರಿಸದೇ, ಸಾಮಾಜಿಕ ಅಂತರ ದೊಂದಿಗೆ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೇಸರ್ ನಿಂದ ಆಗಾಗ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಮುತ್ತು ರಾಯರಡ್ಡಿ ಹೇಳಿದರು.

ಗ್ರಾಮಕ್ಕೆ ಹೊರ ಜಿಲ್ಲೆ, ಹೊರರಾಜ್ಯದಿಂದ ಬಂದಿರುವ ಯಾರಾದರೂ ಇದ್ದರೆ ಅಂತವರ ಮಾಹಿತಿಯನ್ನು ಗ್ರಾ.ಪಂ. ಸದಸ್ಯರಿಗೆ, ಸಿಬ್ಬಂದಿಗಳಿಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಅಥವಾ ಅರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕೂಡಲೆ ತಿಳಿಸಿಬೇಕು ಎಂದು ಸೂಚನೆ ನೀಡಿದರು.

ಕೊರೊನಾ ಎಂಬ ಮಹಾಮಾರಿ ರೋಗವನ್ನು ಚಿಕ್ಕನರಗುಂದ ಗ್ರಾಮದಲ್ಲಿ ಬರದೆ ಇರುವ ಹಾಗೆ ನೋಡಿಕೊಳ್ಳಲು ತಾವೆಲ್ಲರೂ ಕೈ ಜೋಡಿಸಬೇಕು ಎಂದು ಮುತ್ತು ರಾಯರಡ್ಡಿ ಮನವಿ ಮಾಡಿದರು.

ಗ್ರಾ.ಪಂ. ಸೆಕ್ರೆಟರಿ ಕೆಂಚಪ್ಪ ಮಾದರ, ಕ್ಲರ್ಕ್ ಶಿವು ಯಲಿಗಾರ, ಸಿಪಾಯಿ ಸಿದ್ದಪ್ಪ ಹಳಕಟ್ಟಿ ಸೇರಿದಂತೆ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!