6 ಸಾವಿರದ ಗಡಿಗೆ ಬಂದು ನಿಂತ ಸೋಂಕು!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಇಂದು ರಾಜ್ಯದಲ್ಲಿ 5,983 ಜನರಿಗೆ ಸೋಂಕು ತಗುಲಿದ್ದು, 138 ಜನ ಬಲಿಯಾಗಿದ್ದಾರೆ.
ಸದ್ಯ ರಾಜ್ಯದಲ್ಲಿ 1,46,726 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 33,434 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರದಲ್ಲಿ ಕೂಡ ಇಂದು ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ನಗರದಲ್ಲಿ 1,209 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರ, ದಕ್ಷಿಣ ಕನ್ನಡ, ದಾವಣಗೆರೆ, ಮೈಸೂರು ಜಿಲ್ಲೆಯಲ್ಲಿ ಮೃತರ ಸಂಖ್ಯೆ ಎರಡಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಚಿತ್ರದುರ್ಗ, ಗದಗ, ಕೊಡಗು ಮತ್ತು ಯಾದಗಿರಿಯಲ್ಲಿ ಯಾವುದೇ ಮರಣ ಸಂಭವಿಸಿಲ್ಲ.

ಇಂದು ಬಾಗಲಕೋಟೆ 22, ಬಳ್ಳಾರಿ 128, ಬೆಳಗಾವಿ 172, ಬೆಂಗಳೂರು ಗ್ರಾಮಾಂತರ 226, ಬೆಂಗಳೂರು ನಗರ 1,209, ಬೀದರ್ 8, ಚಾಮರಾಜನಗರ 98, ಚಿಕ್ಕಬಳ್ಳಾಪುರ 118, ಚಿಕ್ಕಮಗಳೂರು 198, ಚಿತ್ರದುರ್ಗ 110, ದಕ್ಷಿಣ ಕನ್ನಡ 679, ದಾವಣಗೆರೆ 153, ಧಾರವಾಡ 86, ಗದಗ 34,

ಹಾಸನ 424, ಹಾವೇರಿ 42, ಕಲಬುರಗಿ 25, ಕೊಡಗು 152, ಕೋಲಾರ 145, ಕೊಪ್ಪಳ 48, ಮಂಡ್ಯ 309, ಮೈಸೂರು 596, ರಾಯಚೂರು 16, ರಾಮನಗರ 37, ಶಿವಮೊಗ್ಗ 229, ತುಮಕೂರು 289, ಉಡುಪಿ 166, ಉತ್ತರ ಕನ್ನಡ 169, ವಿಜಯಪುರ83 ಮತ್ತು ಯಾದಗಿರಿಯಲ್ಲಿ 11 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.


Spread the love

LEAVE A REPLY

Please enter your comment!
Please enter your name here