66ನೇ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆ; ಕನ್ನಡಪರ ಸಂಘಟನೆಗಳಿಂದ ಬೃಹತ್ ಧ್ವಜಾರೋಹಣ

0
Spread the love

ವಿಜಯಸಾಕ್ಷಿ ಸುದ್ದಿ, ನರಗುಂದ

Advertisement

ಇಲ್ಲಿನ ಪುರಸಭೆ ಮುಂಭಾಗದಲ್ಲಿರುವ ವೀರಕೇಸರಿ ಬಾಬಾಸಾಹೇಬ್ ಪುತ್ಥಳಿ ಬಳಿ ಕನ್ನಡಪರ ಹೋರಾಟಗಾರರ ಒಕ್ಕೂಟದಿಂದ 66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸೋಮವಾರ 30 ಅಡಿ ಉದ್ದ 9 ಅಡಿ ಅಗಲ ವಿಸ್ತೀರ್ಣದ ಬೃಹತ್ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚನ್ನು ನಂದಿ, ಕರ್ನಾಟಕ ನವ ನಿರ್ಮಾಣ ಸೇನೆ ತಾಲ್ಲೂಕ ಅಧ್ಯಕ್ಷ ಮುತ್ತು ರಾಯರಡ್ಡಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ತಾಲ್ಲೂಕು ಅಧ್ಯಕ್ಷ ಬಸವರಾಜ ತಾವರೆ. ಸ್ವಾಭಿಮಾನಿ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಚಿಂತಾಲ, ಕರ್ನಾಟಕ ರಣಧೀರ ಪಡೆ ಅಧ್ಯಕ್ಷ ಪಾರುಖ್ ಮಜಿದಮನಿ, ಪುರಸಭೆ ಮುಖ್ಯಾಧಿಕಾರಿ ಅಮಿತ್ ತೇರದಾಳ, ವಿ.ಎಚ್.ಕೆಂಚನಗೌಡ್ರ, ಮಾರುತಿ ಅಬ್ಬಿಗೇರಿ, ಬಸವರಾಜ ನೇಸರಗಿ, ಮಂಜುನಾಥ್ ಮೆಣಸಗಿ, ಸಂಗಮೇಶ ಬ್ಯಾಳಿ, ರಾಜು ಹೂಲಿ, ಸಿದ್ದಪ್ಪ ಆಯಟ್ಟಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here