ವಿಜಯಸಾಕ್ಷಿ ಸುದ್ದಿ, ಗದಗ : ಗುರುವಾರ ಇಲ್ಲಿನ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.
ಆರಕ್ಷಕರ/ ಗೃಹ ರಕ್ಷಕ ದಳ/ ಎನ್ಸಿಸಿ ಸೇವಾ ವಿಭಾಗ: ಆರಕ್ಷಕರ ವಿಭಾಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಗದಗ ಗ್ರಾಮೀಣ ಪಿಎಸ್ಐ ಬಿ.ಎಚ್. ಗುಡ್ಲೂನೂರ, ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕೃತರಾದ ಮಾಜಿ ಸಮಾದೇಷ್ಟ ವಿಶ್ವನಾಥ ಯಳಮಲಿ, ಎನ್ಸಿಸಿಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಎ.ಎಸ್.ಎಸ್ ಕಾಮರ್ಸ್ ಕಾಲೇಜಿನ ದರ್ಶನ ನಾಯ್ಡು.
ಮಾಧ್ಯಮ ವಿಭಾಗ: ಪ್ರಜಾವಾಣಿ ಜಿಲ್ಲಾ ವರದಿಗಾರ ಸತೀಶ ಬೆಳ್ಳಕ್ಕಿ, ವಿಸ್ತಾರ ನ್ಯೂಸ್ ಕ್ಯಾಮರಾಮನ್ ಪ್ರಕಾಶ ಗುದ್ದಿನ, ರಿಪಬ್ಲಿಕ್ ಕನ್ನಡ ಜಿಲ್ಲಾ ವರದಿಗಾರ ಮಂಜು ಪತ್ತಾರ, ಉದಯವಾಣಿ ಛಾಯಾಗ್ರಾಹಕ ವಿನಾಯಕ ಚೌಡಾಪುರ, ಕನ್ನಡಪ್ರಭ ಛಾಯಾಗ್ರಾಹಕ ಶಂಕರ ಗುರಿಕಾರ.
ಕಲೆ, ಸಾಹಿತ್ಯ, ಸಂಗೀತ, ರಂಗಭೂಮಿ ಇತರೆ ವಿಭಾಗ: 50 ವರ್ಷಗಳಿಂದ ಜನಪದ ಕ್ಷೇತ್ರದಲ್ಲಿ ಕಲಾಸೇವೆ ಸಲ್ಲಿಸುತ್ತಿದ್ದು, ಆಕಾಶವಾಣಿಯ ಎ ಗ್ರೇಡ್ ಪ್ರಶಸ್ತಿ ಪಡೆದಿದ್ದಕ್ಕಾಗಿ ದ್ಯಾಮಣ್ಣ ಗಡಿಯಪ್ಪ ಬಡಿಗೇರ, 50 ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಕಲಾ ಸೇವೆ ಸಲ್ಲಿಸುತ್ತಿದ್ದು ಆಕಾಶವಾಣಿಯ ಬಿ ಹೈ ಗ್ರೇಡ್ ಪಡೆದಿದ್ದಕ್ಕ್ಕಾಗಿ ದತ್ತಾತ್ತೇಯ ಎನ್.ಕಲಬುರ್ಗಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ನೀಡಲಾಗುವ ಡಾ. ಡಿ.ಸಿ. ಪಾವಟೆ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ ಪಡೆದಿದ್ದಕ್ಕಾಗಿ ಪ್ರೊ. ಬಾಹುಬಲಿ ಪಿ ಜೈನ್ ಅವರನ್ನು ಸನ್ಮಾನಿಸಲಾಯಿತು.
ಶಿಕ್ಷಣ, ಕ್ರೀಡಾ ಹಾಗೂ ಇತರೆ ವಿಭಾಗ: ಉಚಿತ ಯೋಗ ಮತ್ತು ಆರೋಗ್ಯ ಶಿಬಿರಗಳ ಮೂಲಕ ಸಮಾಜ ಸೇವೆ ಮಾಡಿದ್ದಕ್ಕಾಗಿ ಡಾ.ಮಂಗಳಾ ಚಂದ್ರಕಾಂತ ಇಟಗಿ (ಸಜ್ಜನರ), ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಎಸ್.ಎಸ್. ಗೌಡರ, ಕಬಡ್ಡಿಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಸಹದೇವ ಗಣಾಚಾರಿ, ವಾಲಿಬಾಲ್ನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಇಕ್ಬಾಲ್ ಮುಲ್ಲಾ, ವೈ.ಕೆ. ಚೌಡಾಪೂರ, 2023-24ನೇ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪಡೆದಿದ್ದಕ್ಕಾಗಿ ಮಂಜುಳಾ ಇಟಗಿ, 2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪವಿತ್ರಾ ಹೊಸಳ್ಳಿ, 2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕಾಗಿ ಕ್ರಿಯಾ ಶಾ, 2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕಗಿ ಪುಷ್ಪಾ ಐ.ಅಂಗಡಿ, 33ನೇ ಸಬ್ ಜೂನಿಯರ್ ರಾಷ್ಟ್ರೀಯ ಖೋಖೋ ಚಾಂಪಿನ್ಶಿಪ್ನಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಕ್ಕಗಿ ನವರಿನ ಶರೀಫ ಸಾನ ನದಾಫ್, ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ಹಾಕಿ ಪಂದ್ಯಾವಳಿಯಲ್ಲಿ ಬಾಗವಹಿಸಿ ದ್ವಿತೀಯ ಸ್ಥಾನ ಪಡೆದ ನಿಖೇತ ಚಂದನ ಗಾಗಡೆ, ಅಗ್ನಿ ಶಾಮಕ ಠಾಣೆ ತುರ್ತು ಸೇವೆಗಳ ಇಲಾಖೆಯಲ್ಲಿ ಹಾಗೂ ಕ್ರೀಡೆಯಲ್ಲಿ ಅಸಾಧಾರಣ ಸೇವೆ ಸಲ್ಲಿಸಿ 2024-25ನೇ ಸಾಲಿನ ಮುಖ್ಯಮಂತ್ರಿಯವರ ಚಿನ್ನದ ಪದಕ ಪಡೆದ ಪ್ರಧಾನಿ ಮುತ್ತಣ್ಣ, 2ನೇ ಸೌಥ್ ಝೋನ್ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ 2024ರಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಮಾರುತಿ ಕರಿಯವರ, 2ನೇ ಹಾಕಿ ಇಂಡಿಯಾ ಸಬ್ ಜೂನಿಯರ್ ಮೆನ್ ಸೌಥ್ ಝೋನ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆದ ಆದರ್ಶ ಗೋವಿಂದ ಮುಟಗಾರ ಇವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ವಿ.ಪ ಸದಸ್ಯ ಎಸ್.ವಿ. ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸೌಲಭ್ಯ ವಿತರಣೆ
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಲಾಯಿತು. ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ಫಲಾನುಭವಿ ಆಧಾರಿತ ಯೋಜನೆಗಳಾದ ಟಾಕಿಂಗ್ ಲ್ಯಾಪ್ ಟಾಪ್-1, ಬ್ರೈಲ್ ಕಿಟ್-1, ಹೊಲಿಗೆ ಯಂತ್ರ-2, ಯಂತ್ರಚಾಲಿತ ತ್ರಿಚಕ್ರ ವಾಹನ-17 ಮತ್ತು ವಿವಿಧ ಸಲಕರಣೆಗಳ ವಿತರಣೆ ಮಾಡಲಾಯಿತು.