ಬೆಂಗಳೂರು: ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅಂತಾ ಹೇಳುತ್ತಿದ್ದಾರೆ. ಆದ್ರೆ ಕಾಂಗ್ರೆಸ್ನಲ್ಲಿ ಇನ್ನೂ 8 ರಿಂದ 10 ಜನ ಮುಖ್ಯಮಂತ್ರಿ ಸಾಲಿನಲ್ಲಿ ನಿಂತಿದ್ದಾರೆ. ನನಗೂ ಡಿಸಿಎಂ ಸ್ಥಾನ ಕೊಡಿ ಅಂತಾ 18-20 ಜನ ಕಾಯ್ತಿದ್ದಾರೆ. ಈ ಪರಿಸ್ಥಿತಿ ದೇಶದ ಯಾವುದೇ ರಾಜ್ಯದಲ್ಲಿ ನೋಡಲು ಆಗಲ್ಲ.
Advertisement
ಜಾತಿ ಗಣತಿ ವರದಿ ಸ್ವೀಕಾರಕ್ಕೆ ರಾಜ್ಯ ಸರ್ಕಾರ ಸಿದ್ಧತೆ ವಿಚಾರವಾಗಿ ಮಾತನಾಡಿದ ಅವರು ಲಿಂಗಾಯತರು, ಒಕ್ಕಲಿಗರು ಎಂಬ ಪ್ರಶ್ನೆ ಅಲ್ಲ ಎಲ್ಲಾ ವರ್ಗದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಯೋಚಿಸಬೇಕು. ಬೆಂಕಿ ಹಚ್ಚುವ ಕೆಲಸ ಮಾಡಿದರೆ ಜನ ಕ್ಷಮಿಸಲ್ಲ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.