ಲೋಕ ಅದಾಲತದಲ್ಲಿ 8 ಜೋಡಿ ದಂಪತಿಗಳ ಪುನರ್ಮಿಲನ

0
8 Couples Reunion
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು.

Advertisement

ಜಿಲ್ಲೆಯಲ್ಲಿ ಒಟ್ಟು 14 ಬೆಂಚ್‌ಗಳನ್ನು ರಚಿಸಿ ರಾಜೀ ಸಂಧಾನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಒಟ್ಟು 21,668 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅದರಲ್ಲಿ 1,770 ನ್ಯಾಯಾಲಯದಲ್ಲಿರುವ ಚಾಲ್ತಿ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಹಾಗೂ 19,898 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ.

ಇತ್ಯರ್ಥಗೊಂಡ ಪ್ರಕರಣಗಳಲ್ಲಿ ಪಾಲುವಾಟ್ನಿ ವಿಭಾಗದ 103 ಪ್ರಕರಣಗಳು, 20 ಮೋಟಾರು ವಾಹನ ಅಪಘಾತ ಪ್ರಕರಣಗಳು, 65 ಚೆಕ್‌ಬೌನ್ಸ್ ಪ್ರಕರಣಗಳು, 56 ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು, 106 ಇತರೆ ಸಿವಿಲ್ ಪ್ರಕರಣಗಳು, 64 ಬ್ಯಾಂಕ್ ಹಾಗೂ ಹಣ ವಸೂಲಾತಿ ಪ್ರಕರಣಗಳು, 60 ಎಲ್.ಎ.ಸಿ ಎಕ್ಸಿಕ್ಯೂಷನ್ ಪ್ರಕರಣಗಳು, 38 ವೈವಾಹಿಕ ಪ್ರಕರಣಗಳು, 33 ವಿದ್ಯುತ್ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 1,770 ಚಾಲ್ತಿ ಪ್ರಕರಣಗಳನ್ನು ಒಟ್ಟು ರೂ. 11,70,37,527/- ಗಳಿಗೆ ಪರಿಹಾರ ಒದಗಿಸುವುದರ ಮೂಲಕ ರಾಜೀ ಸಂಧಾನ ಮೂಲಕ ಇತ್ಯರ್ಥಪಡಿಸಲಾಗಿದೆ. ಪಾಲುವಾಟ್ನಿ ವಿಭಾಗದ ಒಂದು ಪ್ರಕಣವು ರೂ. 1,56,41,000/- ಗೆ ರಾಜಿ ಆಗಿದ್ದು, ಒಟ್ಟು, 19,898 ವ್ಯಾಜ್ಯಪೂರ್ವ ಪ್ರಕರಣಗಳು ರೂ.6,85,86,576ಗಳಿಗೆ ರಾಜೀ ಸಂಧಾನವಾಗಿವೆ.

ರಾಷ್ಟ್ರೀಯ ಲೋಕ ಅದಾಲತ್‌ಗೆ ಸಹಕಾರ ನೀಡಿದ ವಕೀಲ ವೃಂದದವರಿಗೆ, ಪಕ್ಷಗಾರರಿಗೆ, ಜಿಲ್ಲೆಯ ಎಲ್ಲಾ ನ್ಯಾಯಾಧೀಶರಿಗೆ, ಸಿಬ್ಬಂದಿವರ್ಗದವರಿಗೆ, ಜಿಲ್ಲಾ ನ್ಯಾಯಾಲಯದ ತಾಂತ್ರಿಕ ಸಿಬ್ಬಂದಿವರ್ಗದವರಿಗೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕಂದಾಯ ಇಲಾಖೆ, ಜಿಲ್ಲಾ ಸರ್ಕಾರಿ ವಕೀಲರಿಗೆ, ಅಪರ ಜಿಲ್ಲಾ ಸರ್ಕಾರಿ ವಕೀಲರಿಗೆ, ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ, ಅಭಿಯೋಜನಾ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ, ವಿಮೆ ಕಂಪನಿಯವರಿಗೆ, ಉಪವಿಭಾಗಾಧಿಕಾರಿಗಳಿಗೆ, ಗದಗ ಬೆಟಗೇರಿ ನಗರಸಭೆ, ಬಿಎಸ್‌ಎನ್‌ಎಲ್, ಅಬಕಾರಿ ಇಲಾಖೆ, ಬ್ಯಾಂಕ್, ವಾರ್ತಾ ಇಲಾಖೆಯವರಿಗೆ ಹಾಗೂ ಎಲ್ಲಾ ಮಾದs್ಯಮದವರಿಗೆ, ಲೋಕ ಅದಾಲತ್‌ಗೆ ಸಹಕಾರ ನೀಡಿದ ಎಲ್ಲರಿಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅದs್ಯಕ್ಷರಾದ ಬಸವರಾಜ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಅವರು ದsನ್ಯವಾದಗಳನ್ನು ಅರ್ಪಿಸಿದ್ದಾರೆ.

8 ಜೋಡಿಗಳ ಪುನರ್ಮಿಲನ

ವಿಶೇಷವಾಗಿ ಒಟ್ಟು 8 ಜೋಡಿಗಳು ಈ ರಾಷ್ಟ್ರೀಯ ಲೋಕ ಅದಾಲತದಲ್ಲಿ ಪುನಃ ಒಂದುಗೂಡಿಹೋಗಿದ್ದು ವಿಶೇಷವಾಗಿದೆ. ಗದಗದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ, ಹಾಗೂ ಇನ್ನುಳಿದ ನ್ಯಾಯಾಧೀಶರು ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಐ. ಹಿರೇಮನಿಪಾಟೀಲ, ಸಂಧಾನಕಾರ ವಕೀಲರು, ಪಕ್ಷಗಾರರು ಸೇರಿದಂತೆ ಲೋಕ ಅದಾಲತ್ ಯಶಸ್ವಿಗೊಳಿಸಿದರು. ಅದೇರೀತಿ ಎಲ್ಲಾ ತಾಲೂಕಗಳ ನ್ಯಾಯಾಧೀಶರು ಹಾಗೂ ವಕೀಲ ವೃಂದದವರು, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆಯವರು ಆಯಾ ತಾಲೂಕಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್‌ದಲ್ಲಿ ಪಾಲ್ಗೊಂಡು ರಾಜೀ ಸಂಧಾನ ಯಶಸ್ವಿಗೊಳಿಸಿದರು.


Spread the love

LEAVE A REPLY

Please enter your comment!
Please enter your name here