HomeAgricultureಅನ್ನದಾತನ ಬದುಕು ಹಸನಾಗಲಿ:ಮುಕ್ತಿಮಂದಿರ ಧರ್ಮಕ್ಷೇತ್ರದ ಶ್ರೀಗಳು

ಅನ್ನದಾತನ ಬದುಕು ಹಸನಾಗಲಿ:ಮುಕ್ತಿಮಂದಿರ ಧರ್ಮಕ್ಷೇತ್ರದ ಶ್ರೀಗಳು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಮಂಗಳವಾರ ಶ್ರೀಮಠದ ಜಮೀನಿನಲ್ಲಿ ಭೂಮಿಪೂಜಾ ಕಾರ್ಯ ನೆರವೇರಿಸಿ ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿದರು.

ಈ ವೇಳೆ ಶುಭಾಶೀರ್ವಾದ ಸಂದೇಶ ನೀಡಿದ ಶ್ರೀಗಳು, ಈ ವರ್ಷ ಉತ್ತಮ ಮಳೆ-ಬೆಳೆಯಾಗಿ ಜಗತ್ತಿನ ಸಕಲ ಜೀವರಾಶಿಗಳಿಗೆ ಅನ್ನ ನೀಡುವ ಅನ್ನದಾತನ ಬದುಕು ಹಸನಾಗಲಿ. ಕೃಷಿ ನಮ್ಮ ಸಂಸ್ಕೃತಿಯಾಗಿದ್ದು, ಈ ಬಗ್ಗೆ ಯಾರೂ ಕೀಳರಿಮೆ ಮಾಡದೇ ಹೆಮ್ಮೆಯಿಂದ ತೊಡಗಿಸಿಕೊಳ್ಳಬೇಕು. ಭೂಮಿತಾಯಿ ನಂಬಿ ಬದುಕಿದವರಿಗೆ ಎಂದೂ ಕೇಡಾಗದು. ರೈತರು ಸಾವಯವ ಕೃಷಿಯತ್ತ ಚಿತ್ತ ಹರಿಸಬೇಕು. ಈ ಸಂವತ್ಸರವು ಎಲ್ಲ ಬಾಳಲ್ಲಿ ಸುಖ-ಶಾಂತಿ, ನೆಮ್ಮದಿ ತರಲಿ ಎಂದು ಹಾರೈಸಿದರು.

ಯುಗಾದಿ ಪಾಡ್ಯದಂದು ಬೆಳಿಗ್ಗೆ ಎಲ್ಲರೂ ಹೊಸ ಉಡುಗೆ ತೊಟ್ಟು ಶೃದ್ಧಾ ಭಕ್ತಿಯಿಂದ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಹಿರಿಯರಿಗೆ ನಮಸ್ಕರಿಸಿ ಬೇವು-ಬೆಲ್ಲ ಹಂಚುವದು, ಅದರಲ್ಲೂ ವಿಶೇಷವಾಗಿ ರೈತ ಸಮುದಾಯ ನಸುಕಿನಲ್ಲಿಯೇ ತಮ್ಮ ಜೀವನಾಡಿ ಎತ್ತುಗಳ ಮೈ ತೊಳೆದು, ಶೃಂಗರಿಸಿಕೊಂಡು ಹೊಲಕ್ಕೆ ತೆರಳಿ ಭೂಮಿತಾಯಿ, ಎತ್ತು ಹಾಗೂ ಕೃಷಿ ಪರಿಕರಗಳಿಗೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆಗಳಿಗೆ ಸಾಂಕೇತಿಕ ಚಾಲನೆ ನೀಡಿದರು.

ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳಿಗೆ ಪೂಜೆ ಸಲ್ಲಿಸಿದರು. ಹೊಸ ವರ್ಷದ ದಿನ ಆಭರಣ, ಬಟ್ಟೆ, ಇಲೆಕ್ಟಾçನಿಕ್, ಹೊಸ ವಾಹನ ಖರೀದಿ, ಭೂಮಿಪೂಜೆ ಇತರೆಲ್ಲ ಶುಭ ಕಾರ್ಯಗಳನ್ನು ಕೈಗೊಂಡರು. ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳಲ್ಲಿ ಊರ ದೇವರ ಜಾತ್ರೆ, ಉತ್ಸವ, ಪೂಜೆಗಳು ನೆರವೇರಿದವು.

LEAVE A REPLY

Please enter your comment!
Please enter your name here

E-Paper

E-paper

Must Read

spot_img