HomeMUNICIPALITY NEWSಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ:ಮಹೇಶಕುಮಾರ ವಾಗಿ

ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ:ಮಹೇಶಕುಮಾರ ವಾಗಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ : ತಾಲೂಕಿನ ಯಾವುದೇ ಗ್ರಾಮ ಹಾಗೂ ಪಟ್ಟಣಗಳಲ್ಲಿ ಕುಡಿಯುವ ನೀರು ಸೇರಿದಂತೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಧಿಕಾರಿಗಳು ಹಾಗೂ ಗ್ರಾ.ಪಂ ಪಿಡಿಓಗಳು ನಿಗಾ ವಹಿಸಬೇಕು ಎಂದು ನೋಡಲ್ ಅಧಿಕಾರಿ ಮಹೇಶಕುಮಾರ ವಾಗಿ ಹೇಳಿದರು.

ಅವರು ಬುಧವಾರ ತಾ.ಪಂ ಸಭಾಭವನದಲ್ಲಿ ಜರುಗಿದ ಬರ ನಿರ್ವಹಣೆ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.

ರೋಣ ತಾಲೂಕಿನ ಎಲ್ಲ ಗ್ರಾಮಗಳು ಹಾಗೂ ಶಹರಗಳಲ್ಲಿ ಸಂಪೂರ್ಣ ಮಳೆಯಾಗುವ ತನಕ ಅಧಿಕಾರಿಗಳು ಹಾಗೂ ಪಿಡಿಓಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಮುಖ್ಯವಾಗಿ, ಕುಡಿಯುವ ನೀರಿನ ಸಮಸ್ಯೆ ಹೊಂದಿರುವ ಗ್ರಾಮಗಳ ಬಗ್ಗೆ ಪಿಡಿಓಗಳು ಸಭೆಗೆ ಮಾಹಿತಿ ನೀಡಬೇಕು. ಅಂದಾಗ ಮಾತ್ರ ಸಮಸ್ಯೆ ನಿವಾರಿಸಲು ಸಾದ್ಯವಾಗುತ್ತದೆ ಎಂದು ಸಭೆಗೆ ವಿವರಿಸಿದರು.

ಈ ಸಂಧರ್ಭದಲ್ಲಿ ಹಿರೇಹಾಳ, ಬೆಳವಣಕಿ ಗ್ರಾ.ಪಂಗಳ ಪಿಡಿಓಗಳು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲದಿದ್ದರೂ ಸಹ ನೀರು ಪೂರೈಕೆ ಮಾಡುವ ಪೈಪ್‌ಲೈನ್‌ಗಳ ಕೊರತೆಯಾಗಿದ್ದು, ಇದನ್ನು ಸರಿಪಡಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಆಗ ಮಧ್ಯ ಪ್ರವೇಶಿಸಿದ ಆರ್‌ಡಬ್ಲುಎಸ್ ಇಇ ಜಗದೀಶ ಮಡಿವಾಳ, ಅನುದಾನದ ಕೊರತೆಯಿದ್ದ ಹಿನ್ನೆಲೆಯಲ್ಲಿ ಕಾಮಗಾರಿ ಕೈಗೆತ್ತಿಕೊಂಡಿಲ್ಲ. ತತಕ್ಷಣ ಏಜೆನ್ಸಿಗಳ ಮೂಲಕ ಕಾಮಗಾರಿಯನ್ನು ನಡೆಸಲಾಗುವುದು ಎಂದರು.

ಜಿಗಳೂರ ಕೆರೆಯಲ್ಲಿ ನೀರು ಇರುವುದರಿಂದ ಸದ್ಯದ ಸ್ಥಿತಿಯಲ್ಲಿ ರೋಣ ಪುರಸಭೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ ಎಂದು ಮುಖ್ಯಾಧಿಕಾರಿ ಕುಲಕರ್ಣಿ ಸಭೆಗೆ ಮಾಹಿತಿ ನೀಡಿದರು.

ಅಬ್ಬಿಗೇರಿ, ಜಕ್ಕಲಿ, ಕುರಹಟ್ಟಿ, ಹೊಳೆಮಣ್ಣೂರ, ಹೊಳೆಆಲೂರ ಗ್ರಾ.ಪಂ ಪಿಡಿಓಗಳು ಸಹ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ ಎಂದು ನೋಡಲ್ ಅಧಿಕಾರಿಗಳಿಗೆ ಸ್ಪಷ್ಟಪಡಿಸಿದರು.

ತಹಸೀಲ್ದಾರ್ ನಾಗರಾಜ ಕೆ, ತಾ.ಪಂ ಇಒ ಎಸ್.ಕೆ. ಇನಾಮದಾರ, ಎಡಿ ರಿಯಾಜ್ ಖತೀಬ ಉಪಸ್ಥಿತರಿದ್ದರು.

 

ಕುಡಿಯುವ ನೀರು ಸಂಗ್ರಹ ಟ್ಯಾಂಕರ್‌ಗಳನ್ನು ಶುಚಿಗೊಳಿಸಬೇಕು. ನೀರು ಪೂರೈಕೆ ಮಾಡುವ ಪೈಪ್‌ಲೈನ್‌ಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು. ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ರೋಗಗಳು ಹರಡದಂತೆ ಮುನ್ನಚ್ಚೆರಿಕೆಯನ್ನು ಅಧಿಕಾರಿಗಳು, ಪಿಡಿಓಗಳು ವಹಿಸಬೇಕು.
– ಮಹೇಶಕುಮಾರ ವಾಗಿ.
ನೋಡಲ್ ಅಧಿಕಾರಿ, ರೋಣ.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!