HomePolitics Newsಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ : ಆನಂದಸ್ವಾಮಿ ಗಡ್ಡದೇವರಮಠ

ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ : ಆನಂದಸ್ವಾಮಿ ಗಡ್ಡದೇವರಮಠ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ರಾಣೇಬೆನ್ನೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಪಟ್ಟಣದಲ್ಲಿ ನಡೆದ ಬೃಹತ್ ಮೆರವಣಿಗೆಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುವಂತೆ ಮತದಾರರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಣೇಬೆನ್ನೂರು ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಡವರು, ಜನಸಾಮಾನ್ಯರು ಹಾಗೂ ಮಹಿಳೆಯರಿಗೆ ಅಭೂತಪೂರ್ವ ಕೊಡುಗೆಗಳನ್ನು ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರು ಅಪಾರ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ನಮ್ಮ ಮೇಲೆ ವಿಶ್ವಾಸವಿಟ್ಟು ಮತ ಹಾಕಿದವರಿಗೆ ಋಣಿಯಾಗಿರುತ್ತೇವೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತೇವೆ ಎಂದರು. ಮಾಜಿ ಶಾಸಕ ಡಿ.ಆರ್. ಪಾಟೀಲ, ರಾಣೇಬೆನ್ನೂರು ಶಾಸಕರು ಪ್ರಕಾಶ್ ಕೋಳಿವಾಡ, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img