HomeBengaluru Newsಮೋದಿಯವರ ಹೇಳಿಕೆ ಹತಾಶೆಯ ಪ್ರತೀಕ : ತಾಹೇರ್ ಹುಸೇನ್

ಮೋದಿಯವರ ಹೇಳಿಕೆ ಹತಾಶೆಯ ಪ್ರತೀಕ : ತಾಹೇರ್ ಹುಸೇನ್

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಮುಸ್ಲಿಂ ಸಮುದಾಯದ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ದ್ವೇಷ ಭಾಷಣ ಅವರ ಹತಾಶ ಮನಸ್ಥಿತಿಯನ್ನು ಬಹಿರಂಗಪಡಿಸುತ್ತಿದೆ. ಇದು ಅತ್ಯಂತ ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೇರ್ ಹುಸೇನ್ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೊದಲ ಹಂತದ ಮತದಾನದ ಬಳಿಕ ಪ್ರಧಾನಿಗಳಿಗೆ ಸೋಲಿನ ವಾಸನೆ ಬಡಿದಿರಬಹುದು. ಸುಳ್ಳು ಹೇಳಿ ಜನರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಪ್ರಧಾನಿಗಳ ಬಗ್ಗೆ ಜನರಿಗೆ ಅರಿವಾಗತೊಡಗಿದೆ. ಬೇರೆ ದಾರಿ ಕಾಣದೆ ಚುನಾವಣಾ ಪ್ರಚಾರ ಸಭೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸತೊಡಗಿದ್ದಾರೆ. ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img