HomeGadag Newsಜಿಲ್ಲಾ ಉತ್ತಮ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಜಿಲ್ಲಾ ಉತ್ತಮ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ
ತಾಲೂಕು ಮಕ್ಕಳ ಸಾಹಿತ್ಯ ವೇದಿಕೆಯಿಂದ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ. ಹಿರೇಮಠ ಹಾಗೂ ಎಸ್.ಜಿ. ಅಪರಂಜಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮಕ್ಕಳ ಸಾಹಿತ್ಯ ವೇದಿಕೆಯ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಇನಾಮತಿ, ತರಗತಿಗಳಲ್ಲಿ ಶಿಕ್ಷಕರು ಅಂಕ ಗಳಿಕೆಗಾಗಿ ಮಾತ್ರ ಮಕ್ಕಳನ್ನು ಸಜ್ಜುಗೊಳಿಸಬಾರದು. ಅವರಿಗೆ ಜೀವನ ಪಾಠವನ್ನು ಕಲಿಸಬೇಕು. ಮಕ್ಕಳ ನೈಜ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತಮ ಮಾರ್ಗದರ್ಶನ ನೀಡಬೇಕು ಎಂದರು.
ಶಿಕ್ಷಕ ವೃತ್ತಿಯು ತುಂಬಾ ಪವಿತ್ರವಾದದ್ದು. ಸಮಾಜ ಸುಧಾರಿಸುವ ಹಾಗೂ ಮಕ್ಕಳನ್ನು ಸಮಾಜದ ಉತ್ತಮ ಪ್ರಜೆಗಳನ್ನಾಗಿ ಮಾಡುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷ ಮಂಜುನಾಥ ಇಟಗಿ ಮಾತನಾಡಿ, ರಾಷ್ಟ್ರ ಹಾಗೂ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು ಎಂದು ಹೇಳಿದರು.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಪಿ.ಜಿ. ಹಿರೇಮಠ, ಎಸ್.ಜಿ. ಅಪರಂಜಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಂ.ಎಸ್. ಶೀರನಹಳ್ಳಿ, ಮಂಜುನಾಥ ಮುಧೋಳ, ಪವನ ಚೋಪ್ರಾ, ಮಹೇಶ ಎಸ್.ಎಚ್., ಪ್ರಭಾಕರ ಮುನವಳ್ಳಿ, ಪಿ.ಎನ್. ಉಮಲೂಟಿ, ಬಿ.ಎಚ್. ಹಲವಾಗಲಿ, ಪಿ.ಎನ್. ಕಲಘಟಗಿ, ಶಿವರಾಜ ಹಿರೇಮಠ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಡಾ.ನಿಂಗು ಸೊಲಗಿ ಸ್ವಾಗತಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!