HomeUncategorizedನಾವೆಲ್ಲರೂ ಕಡ್ಡಾಯವಾಗಿ ಕನ್ನಡ ಬಳಸಬೇಕು : ಡಿ.ಬಿ. ಬಳಿಗಾರ

ನಾವೆಲ್ಲರೂ ಕಡ್ಡಾಯವಾಗಿ ಕನ್ನಡ ಬಳಸಬೇಕು : ಡಿ.ಬಿ. ಬಳಿಗಾರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕನ್ನಡ ಭಾಷೆ ತನ್ನದೇ ಆದ ಶ್ರೇಷ್ಠ, ಶ್ರೀಮಂತ ಇತಿಹಾಸ ಹೊಂದಿ ಶಾಸ್ತ್ರೀಯ ಭಾಷೆಯ ಮನ್ನಣೆ ಪಡೆದಿದೆ. ಇಂತಹ ಭಾಷೆಯ ಬೆಳವಣಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಹಿರಿದಾಗಿದೆ. ಇದಕ್ಕೆ ಅನೇಕ ಮಹನೀಯರು ಕಾರಣರಾಗಿದ್ದಾರೆ. ಕನ್ನಡ ಭಾಷೆಯ ಉಳಿಸಿ-ಬೆಳೆಸಲು ನಾವೆಲ್ಲರೂ ಕಡ್ಡಾಯವಾಗಿ ಕನ್ನಡ ಬಳಸಲೇಬೇಕು ಎಂದು ಹಿರಿಯ ಸಾಂಸ್ಕೃತಿಕ ಚಿಂತಕ ಡಿ.ಬಿ. ಬಳಿಗಾರ ಅಭಿಪ್ರಾಯಪಟ್ಟರು.

ಅವರು ಲಕ್ಷ್ಮೇಶ್ವರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಹಮ್ಮಿಕೊಂಡ ಕಸಾಪ 110ನೇ ಸಂಸ್ಥಾಪನಾ ದಿನಾಚರಣೆ ಹಾಗೂ ವಿದ್ಯಾರ್ಥಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಲಕ್ಷ್ಮೇಶ್ವರ ತಾಲೂಕು ಕಸಾಪ ಘಟಕದ ವತಿಯಿಂದ ಅತ್ಯುತ್ತಮ ಕಾರ್ಯಚಟುವಟಿಕೆಗಳು ನಡೆಯುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ.ರಾ.ವಿ.ಪ. ಜಿಲ್ಲಾಧ್ಯಕ್ಷ ರಮೇಶ ರಿತ್ತಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಾಪುಗೌಡ್ರ ಭರಮಗೌಡ್ರ, ಗಂಗಾಧರ ಅರಳಿ ಮಾತನಾಡಿದರು.

ದಿನಾಚರಣೆಯ ಅಂಗವಾಗಿ ನಡೆದ ವಿದ್ಯಾರ್ಥಿ ವಿಚಾರ ಸಂಕಿರಣದಲ್ಲಿ ಶ್ರೀನಿಧಿ ಶಿಳ್ಳಿನ, ಪೂಜಾ ಆರಾಧ್ಯಮಠ, ರಕ್ಷಿತಾ ಸಂಗನಪೇಟ ಮತ್ತು ಸಹನಾ ಮೇಟಿ ಇವರು `ಜನಸಾಮಾನ್ಯರತ್ತ ಕನ್ನಡ ಸಾಹಿತ್ಯ ಪರಿಷತ್ತು’ ವಿಷಯದ ಕುರಿತು ಉತ್ತಮವಾಗಿ ವಿಷಯ ಮಂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ವಿಶ್ರಾಂತ ಮುಖ್ಯ ಶಿಕ್ಷಕಿ ಎ.ಎಸ್. ಸವದತ್ತಿ ಹಾಗೂ ವಿಶ್ರಾಂತ ಶಿಕ್ಷಕ ವ್ಹಿ.ಎಂ. ಹೂಗಾರ ಹಾಡುಗಳನ್ನು ಪ್ರಸ್ತುತ ಪಡಿಸಿದರು.

ಕಾರ್ಯಕ್ರಮದ ಸಂಚಾಲಕರಾದ ಎಸ್.ಬಿ.ಅಣ್ಣಿಗೇರಿ, ಪಿ.ಎಚ್. ಕೊಂಡಾಬಿಂಗಿ, ಶಂಕ್ರಪ್ಪ ಶಿಳ್ಳಿನ, ಶ್ರೀಮತಿ ಶಿಳ್ಳಿನ್, ಈರಣ್ಣ ಗಾಣಿಗೇರ ಉಪಸ್ಥಿತರಿದ್ದರು. ಶ್ರೀನಿಧಿ ಶಿಳ್ಳಿನ ಪ್ರಾರ್ಥಿಸಿದಳು, ಕಾರ್ಯಕಾರಿ ಮಹಿಳಾ ಸದಸ್ಯ ನಿರ್ಮಲಾ ಅರಳಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ನಾಗರಾಜ ಮಜ್ಜಿಗುಡ್ಡ ನಿರೂಪಿಸಿದರು. ಕನ್ನಡ ಉಪನ್ಯಾಸಕ ತಮ್ಮನಗೌಡ ಪಾಟೀಲ ವಂದಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ರಾಂತ ಉಪನ್ಯಾಸಕ ಎಸ್.ಎನ್. ಮಳಲಿ, ಕಸಾಪ ಲಕ್ಷ್ಮೇಶ್ವರ ತಾಲೂಕು ಘಟಕ ವಿಶಿಷ್ಟ ಹಾಗೂ ವಿಭಿನ್ನ ಕಾರ್ಯಕ್ರಮ ಸಂಘಟಿಸುವುದರ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಘಟಕವಾಗಿದೆ ಎಂದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!