HomeEducationಆರ್.ಎಸ್. ಬುರಡಿಯವರ ನೇತೃತ್ವದಲ್ಲಿ ಪಠ್ಯಪುಸ್ತಕ ವಿತರಣೆ

ಆರ್.ಎಸ್. ಬುರಡಿಯವರ ನೇತೃತ್ವದಲ್ಲಿ ಪಠ್ಯಪುಸ್ತಕ ವಿತರಣೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : 2024-25ನೇ ಶೈಕ್ಷಣಿಕ ವರ್ಷ ಆರಂಭಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಇದ್ದರೂ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗದಗ ಶಹರದಲ್ಲಿ ಪಠ್ಯಪುಸ್ತಕಗಳ ವಿತರಣಾ ಕಾರ್ಯ ಜರುಗಿತು.

ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿಯವರ ನೇತೃತ್ವದಲ್ಲಿ ಪ್ರಾಥಮಿಕ ವಿಭಾಗದ ಶಿಕ್ಷಣ ಸಂಯೋಜಕರಾದ ಈಶಪ್ಪ ಮಡಿವಾಳರ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ವಿತರಣೆ ಮಾಡುತ್ತಿದ್ದಾರೆ.

ಈಗಾಗಲೇ ಪಠ್ಯಪುಸ್ತಕಗಳ ವಿತರಣಾ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು, ಗದಗ ಶಹರದಲ್ಲಿ ವಿಶೇಷ ಕಾಳಜಿ ವಹಿಸಿ ಶೈಕ್ಷಣಿಕ ವರ್ಷದ ಆರಂಭಕ್ಕೆ ಶಿಕ್ಷಕರಿಗೆ ಪೂರ್ವತಯಾರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ ಎಂದು ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img