ವಿಜಯಸಾಕ್ಷಿ ಸುದ್ದಿ, ಧಾರವಾಡ : 2024-25ನೇ ಸಾಲಿನ ಜಿಲ್ಲಾಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಧಾರವಾಡ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಕರಡಿಗುಡ್ಡದಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ ವಿದ್ಯಾರ್ಥಿಗಳಿಗೆ ಸಮವಸ್ತç, ಪಠ್ಯಪುಸ್ತಕಗಳನ್ನು ವಿತರಿಸಿ, ವಿದ್ಯಾರ್ಥಿ ಜೀವನದ ಮಹತ್ವ, ಗುರುಗಳ ಪ್ರಾಮುಖ್ಯತೆಯ ಬಗ್ಗೆ ಮಕ್ಕಳಿಗೆ ವಿವರಿಸಿದರು.
ಧಾರವಾಡ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿ, 2023-24ನೇ ಸಾಲಿನಲ್ಲಿ ಧಾರವಾಡ ತಾಲೂಕು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಸಾಧಿಸಿದೆ. ಇದಕ್ಕೆ ಕಾರಣೀಭೂತರಾದ ತಾಲೂಕಿನ ಎಲ್ಲ ಮುಖ್ಯೋಪಾಧ್ಯಾಯರಿಗೆ, ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.
ಗ್ರಾಮ ಪರಿವರ್ತನಾ ಟ್ರಸ್ಟ್ನ ಅಧ್ಯಕ್ಷ ಶಿವಪ್ಪ ಕುರಗುಂದ ಮಾತನಾಡಿ, ಸರಕಾರವು ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ, ಉತ್ತಮ ಶಿಕ್ಷಕರಿದ್ದಾರೆ. ಇದರ ಪ್ರಯೋಜನವನ್ನು ಎಲ್ಲ ವಿದ್ಯಾರ್ಥಿಗಳೂ ಪಡೆಯಬೇಕು ಎಂದು ಹೇಳಿದರು.
ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪಾಂಡುರಂಗ ಅಂಕಲಿ ಮಾತನಾಡಿದರು. ವಿದ್ಯಾರ್ಥಿಗಳಾದ ಸುಷ್ಮಾ ಮಡಿವಾಳರ, ಪ್ರೀತಿ ಸಂಗಪ್ಪನವರ, ವರ್ಷಾ ಪೂಜಾರ ಶಾಲಾ ಪ್ರಾರಂಭೋತ್ಸವದ ಕುರಿತಾಗಿ ಮಾತನಾಡಿದರು. ಉಪಪ್ರಾಂಶುಪಾಲರಾದ ಡಾ. ಪೂರ್ಣಿಮಾ ಮುಕ್ಕುಂದಿಯವರು ಸ್ವಾಗತಿಸಿದರು.
ವಿಜಯಲಕ್ಷ್ಮಿ ಪುರಾಣಿಕಮಠ ಕಾರ್ಯಕ್ರಮ ನಿರೂಪಿಸಿದರು. ಪ್ರೇಮಾ ಎಲಿಗಾರ ವಂದಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರಿ ಪ್ರಾಚಾರ್ಯರಾದ ಎನ್.ಟಿ. ಕಾಖಂಡಕಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ತನ್ವೀರ ಡಿ., ಎಸ್ಡಿಎಂಸಿ ಉಪಾಧ್ಯಕ್ಷ ಶೇಖಪ್ಪ ಮಂಗಳಗಟ್ಟಿ, ಸದಸ್ಯ ಶಂಕ್ರಣ್ಣ ಬಾಚಗುಂಡಿ, ಮಲ್ಲಿಕಾರ್ಜುನ ಜಕ್ಕಣ್ಣವರ, ಶಿಕ್ಷಣ ಸಂಯೋಜಕರಾದ ಟಿ.ಎನ್. ಸಯ್ಯದ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರು, ಗ್ರಾಮಸ್ಥರು ಹಾಗೂ ಪಾಲಕರು ಉಪಸ್ಥಿತರಿದ್ದರು.
Advertisement