ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಬಿ.ವೈ. ವಿಜಯೇಂದ್ರ ಅವರನ್ನು ಗದಗ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಶಿವಪ್ಪ ಮುಳಗುಂದ ನೇತೃತ್ವದ ನಿಯೋಗ ಗುರುವಾರ ಭೇಟಿ ಮಾಡಿ ಅಭಿನಂದಿಸಿತು. ನಿಯೋಗದಲ್ಲಿ ಬಿಜೆಪಿ ಮುಖಂಡರಾದ ಶಶಿಧರ ಕಳಸಾಪೂರಶೆಟ್ರ, ಫಕೀರೇಶ ಮುಳಗುಂದ, ಮಹೇಶ ಪಟ್ಟಣಶೆಟ್ಟಿ, ವಿಜಯಲಕ್ಷ್ಮಿ ಮಾನ್ವಿ, ಕವಿತಾ ಜಾಲಿಹಾಳ, ಪ್ರಕಾಶ ಇನಾಮದಾರ ಸೇರಿದಂತೆ ಹಲವರಿದ್ದರು.