ಲಕ್ಷ್ಮೇಶ್ವರ ಸಮೀಪದ ಬಸವನಕೊಪ್ಪ ಗ್ರಾಮದ ಆರಾಧ್ಯದೈವ ಬಸನಕೊಪ್ಪ ಬಸವಣ್ಣ ದೇವರ ಜಾತ್ರಾ ಮಹೋತ್ಸವ ಅಂಗವಾಗಿ ಜೂನ್ 18ರಂದು ಸಂಜೆ 5 ಗಂಟೆಗೆ ಕಡುಬಿನ ಕಾಳಗ ಜರುಗುವುದು. ಹೂವಿನಶಿಗ್ಲಿ ಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮದಿಂದ ಅಪಾರ ಭಕ್ತ ಸಮೂಹ ಪಾಲ್ಗೊಳ್ಳಲಿದೆ ಎಂದು ಜಾತ್ರಾ ಕಮಿಟಿ ತಿಳಿಸಿದೆ.