ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಅವರು ಮೃತಪಟ್ಟಿದ್ದಾರೆ.
Advertisement
ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.
ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು.