ಬೆಂಗಳೂರು:- ಜನಪ್ರಿಯ ನಟಿ ಅಪರ್ಣಾ ವಿಧಿವಶ ಆಗಿರುವ ಹಿನ್ನೆಲೆ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಬನಶಂಕರಿಯಲ್ಲಿರುವ ಅಪರ್ಣಾ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಶಾಸಕ ಮುನಿರತ್ನರಿಂದ ನಟಿ ಅಪರ್ಣಾ ಅವರ ಅಂತಿಮ ದರ್ಶನ ಪಡೆದರು.
ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ



