HomeKarnataka NewsCWRC ಆದೇಶ ಖಂಡಿಸಿ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಪ್ರತಿಭಟನೆ

CWRC ಆದೇಶ ಖಂಡಿಸಿ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಪ್ರತಿಭಟನೆ

For Dai;y Updates Join Our whatsapp Group

Spread the love

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ತಮಿಳುನಾಡಿಗೆ ನೀರು ಬಿಡಲು ಆದೇಶ ಹಿನ್ನಲೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಆಕ್ರೋಶ‌ ಮತ್ತೆ ಭುಗಿಲೆದ್ದಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಕನ್ನಡ ಸೇನೆ, ಹಾಗೂ ವಿವಿಧ ಸಂಘಟನೆಗಳಿಂದ ಬೆಂ-ಮೈ ಹೆದ್ದಾರಿ ತಡೆದು CWRC ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. CWRC ಆದೇಶದಿಂದ ಕಾವೇರಿ ಹೋರಾಟ ಮತ್ತೆ  ಮುನ್ನೆಲೆಗೆ ಬಂದಿದ್ದು, ರಾಜ್ಯ ಹಾಗೂ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

CWRC ಆದೇಶ ಪಾಲನೆ ಮಾಡದಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಅದಲ್ಲದೆ ನಮಗೆ ಕುಡಿಯುವ ನೀರಿಲ್ಲ, ತಮಿಳುನಾಡಿಗೆ ಮತ್ತೆ ನೀರು ಕೊಡುವುದು ಸರಿಯಲ್ಲ. ತಕ್ಷಣವೇ ಸಂಸದರು ಸಭೆ ಕರೆದು ಧ್ವನಿ ಎತ್ತಬೇಕು. ಸಿಎಂ ಡಿಸಿಎಂ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಕರ್ನಾಟಕಕ್ಕೆ ಅನ್ಯಾಯ ಮಾಡದಂತೆ ಆಗ್ರಹಿಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಂತೆ ಮನವಿ ಮಾಡಿದ್ದು, ಪ್ರತಿಭಟನೆಯಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮಾಜಿ ಪರಿಷತ್ತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಸುನಂದಾ ಜಯರಾಂ, ಸೇರಿ ಹಲವರು ಭಾಗಿಯಾಗಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!