ಸಿದ್ದರಾಮಯ್ಯ ಒಬ್ಬ ಭಯಂಕರವಾದ ಸರ್ವಾಧಿಕಾರಿ: ಪ್ರಹ್ಲಾದ್‌ ಜೋಶಿ

0
Spread the love

ಬೆಂಗಳೂರು: ಸಿದ್ದರಾಮಯ್ಯ ಒಬ್ಬ ಭಯಂಕರವಾದ ಸರ್ವಾಧಿಕಾರಿ, ಅಹಂಕಾರಿ ಮತ್ತು ಭ್ರಷ್ಟನಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 1975ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಸರ್ವಾಧಿಕಾರಿಯಾಗಿದ್ದರು.

Advertisement

ಇದೀಗ 2024-25ರಲ್ಲಿ ಸಿದ್ದರಾಮಯ್ಯ ಒಬ್ಬ ಭಯಂಕರವಾದ ಸರ್ವಾಧಿಕಾರಿ, ಅಹಂಕಾರಿ ಮತ್ತು ಭ್ರಷ್ಟನಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ಗೆ ಏನಾದರೂ ಕಮಾಂಡ್ ಇದ್ದರೆ ಸಿದ್ದರಾಮಯ್ಯರನ್ನು ತಕ್ಷಣ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದರು.

ಇನ್ನೂ ಮುಡಾ ಹಗರಣದಲ್ಲಿ ಸಿದ್ದರಾಮಯ್ಯರ ನೇರ ತನಿಖೆ ಆಗಬೇಕಿದೆ. ಅವರ ಪಾಲ್ಗೊಳ್ಳುವಿಕೆ ಇಲ್ಲದೇ ಇಂಥ ದೊಡ್ಡ ಭ್ರಷ್ಟಾಚಾರ ಆಗಲು ಸಾಧ್ಯವಿಲ್ಲ ಎಂದು ನುಡಿದ ಅವರು, ಮೈಸೂರು ಅವರ ತವರೂರು. ಈ ಹಗರಣಕ್ಕೆ ಅವರೇ ನೇರ ಹೊಣೆ ಎಂದು ತಿಳಿಸಿದರು. ಅವರಿಗೆ ಗೊತ್ತಿದ್ದೇ ಭ್ರಷ್ಟಾಚಾರಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು.


Spread the love

LEAVE A REPLY

Please enter your comment!
Please enter your name here