ಹಾಸನದವರಿಗೆ ಬೆಂಗಳೂರಿನ ಗಮ್ಮತ್ತು ಗೊತ್ತಿಲ್ಲ, ಅದಕ್ಕೆ ವಿರೋಧ ಮಾಡುತ್ತಿದ್ದಾರೆ: ಶಾಸಕ ಹೆಚ್‌ಸಿ ಬಾಲಕೃಷ್ಣ

0
Spread the love

ರಾಮನಗರ: ಹಾಸನದವರಿಗೆ ಬೆಂಗಳೂರಿನ ಗಮ್ಮತ್ತು ಗೊತ್ತಿಲ್ಲ. ಆದ್ದರಿಂದ ಇದಕ್ಕೆ ವಿರೋಧ ಮಾಡುತ್ತಿದ್ದಾರೆ. ನಮಗೂ ಬೆಂಗಳೂರಿಗೂ ಅವಿನಾಭಾವ ಸಂಬಂಧ ಇದೆ ಎಂದು ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಹೇಳಿದರು. ಮಾಗಡಿಯಲ್ಲಿ ಮಾತನಾಡಿದ ಅವರು,

Advertisement

ಹಾಸನದವರಿಗೆ ಬೆಂಗಳೂರಿನ ಗಮ್ಮತ್ತು ಗೊತ್ತಿಲ್ಲ. ಆದ್ದರಿಂದ ಇದಕ್ಕೆ ವಿರೋಧ ಮಾಡುತ್ತಿದ್ದಾರೆ. ನಮಗೂ ಬೆಂಗಳೂರಿಗೂ ಅವಿನಾಭಾವ ಸಂಬಂಧ ಇದೆ. ನಾವು ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯವರೇ. ರಾಮನಗರ ಹೆಸರು ಬದಲಾವಣೆ ಆದರೆ ಕಚೇರಿಗಳು ಎಲ್ಲೂ ಹೋಗಲ್ಲ.ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ.

ಆದರೆ ಬೆಂಗಳೂರು ದಕ್ಷಿಣ ಎಂಬ ಹೆಸರು ಬದಲಾವಣೆಗೆ ಮನವಿ ಮಾಡಿದ್ದೇವೆ ಎಂದರು. ಇನ್ನೂ ಮುಡಾ ಬಹುಕೋಟಿ ಹಗರಣ ವಿಚಾರ ಕುರಿತು ಮಾತನಾಡಿ, ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಮುಡಾ ಭೂಸ್ವಾಧೀನ ಮಾಡಿದ ಬಳಿಕ ಜಾಗದ ಮಾಲೀಕರಿಗೆ 50:50 ಅನುಪಾತದಲ್ಲಿ ಸೈಟ್ ಹಂಚುತ್ತಾರೆ. ಅದೇ ರೀತಿ ಸಿಎಂ ಕೂಡ ಸೈಟ್ ಪಡೆದಿದ್ದಾರೆ. ಇಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here