Homekoppalಮೀಸಲಾತಿ ಪಡೆಯುವವರೆಗೆ ವಿರಮಿಸೆವು

ಮೀಸಲಾತಿ ಪಡೆಯುವವರೆಗೆ ವಿರಮಿಸೆವು

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಶೇ. 3 ಜನರಿಗೆ ಕೇಳದೆ ಶೇ. 10 ನಿಗದಿ ಮಾಡಿರುವ ಮನುವಾದಿಗಳು ಶೇ. 8.5 ರಷ್ಟಿರುವ ಪರಿಶಿಷ್ಟ ಪಂಗಡಕ್ಕೆ ಮೀಸಲು ನೀಡಲು ಮೀನಾಮೇಷ ಎಣಿಸುತ್ತಿವೆ, ಮೀಸಲಾತಿ ಪಡೆಯುವವರೆಗೆ ವಿರಮಿಸುವದಿಲ್ಲ ಎಂದು ಸಮಾಜದ ಜಿಲ್ಲಾಧ್ಯಕ್ಷ ಟಿ. ರತ್ನಾಕರ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಮುಂದುಗಡೆ ಕೊಪ್ಪಳ ಜಿಲ್ಲಾ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಹಮ್ಮಿಕೊಂಡಿರುವ ಹತ್ತು ದಿನಗಳ ಪ್ರತಿಭಟನಾ ಧರಣಿ ಉದ್ದೇಶಿಸಿ ಮಾತನಾಡಿದರು.
ಮಾತು ಉಳಿಸಿಕೊಳ್ಳಿ: ಸಮಾಜಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೆ. 7.5 ಮೀಸಲು ನಿಗದಿಗೆ ಕೊಟ್ಟ ಗಡುವು, ಅವಧಿ ಮುಗಿದಿದ್ದು ಸರಕಾರ ಶೀಘ್ರ ಕ್ಯಾಬಿನೆಟ್ ಅನುಮೋದನೆ ಪಡೆಯಬೇಕು. ಇಲ್ಲವಾದಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಇನ್ನಷ್ಟು ತೀವ್ರ ಸ್ವರೂಪದ ಹೋರಾಟ ಮಾಡಲು ನಿರ್ಧರಿಸಲಾಯಿತು. ಫೆಬ್ರವರಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ವರದಿ ಬಂದ ತಕ್ಷಣ ಮೀಸಲಾತಿ ನೀಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಮಾತು ಉಳಿಸಿಕೊಳ್ಳಬೇಕು ಎಂದು ಹೇಳಿದರು.
ಅ. 30ರ ವರೆಗೆ ಧರಣಿ: ರಾಜ್ಯ ಕಾರ್ಯದರ್ಶಿ ಸುರೇಶ ಡೊಣ್ಣಿ ಮಾತನಾಡಿ, ಸಮಾಜದ ನಾಲ್ಕು ದಶಕದ ಹೋರಾಟಕ್ಕೆ ಬೆಲೆ ಕೊಡಬೇಕು. ಇಲ್ಲವಾದಲ್ಲಿ ಬೇಡರು ಬಯಲಿಗೆ ಬರುತ್ತಾರೆ. ತಮ್ಮನ್ನು ಹಗುರವಾಗಿ ಪರಿಗಣಿಸಬಾರದು ಎಂದರು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಅ. 30 ರವರೆಗೆ ಧರಣಿ ನಡೆಸಲಾಗುವುದು ಎಂದರು.
ಮಂಜುನಾಥ ಜಿ. ಗೊಂಡಬಾಳ ಮಾತನಾಡಿ, ಕರ್ನಾಟಕ ಸರಕಾರ ಪರಿಶಿಷ್ಟ ಪಂಗಡಕ್ಕೆ ಕೊಡಬೇಕಿರುವ ಶೇ. 7.5 ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿಯನ್ನು ಈ ಕೂಡಲೇ ಜಾರಿಗೆ ತರಬೇಕು. ತಮ್ಮ ಸರಕಾರ ಹಲವು ಬಾರಿ ಭರವಸೆ ನೀಡಿದ್ದು, ಜ. ನಾಗಮೋಹನ್ ದಾಸ್ ವರದಿ ಬಂದು ನಾಲ್ಕು ತಿಂಗಳು ಕಳೆದಿವೆ. ಅನುಷ್ಠಾನಕ್ಕೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಈ ನಾಲ್ಕು ದಶಕಗಳಲ್ಲಿ ಹಲವು ಜಾತಿಯ ಜನರು ಪರಿಶಿಷ್ಟ ಪಂಗಡದ ಪರಿಮಿತಿಯಲ್ಲಿ ಬಂದು ಸೇರಿದ್ದಾರೆ. ವಾಸ್ತವ ಅಂಕಿ ಅಂಶಗಳ ಪ್ರಕಾರ ಪರಿಶಿಷ್ಟ ಪಂಗಡದ ಜನಸಂಖ್ಯೆ ಶೇ. 8.5 ಆಗುತ್ತದೆ. ಹೀಗಿರುವಾಗ ಸಂವಿಧಾನಬದ್ಧ ಮೀಸಲು ನೀಡಲು ಮೀನಾಮೇಷ ಎಣಿಸುತ್ತಿರುವದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ, ಜಿಲ್ಲಾ ಕಾರ್ಯದರ್ಶಿ ಶಿವಮೂರ್ತಿ ಗುತ್ತೂರ್, ಮಾರ್ಕಂಡಪ್ಪ ಕಲ್ಲನವರ, ಹನುಮಂತಪ್ಪ ಗುದಗಿ, ಬಸವರಾಜ ಶಹಪೂರ, ಮುದಿಯಪ್ಪ ತಿಗರಿ, ನಾಗರಾಜ ಕಿಡದಾಳ, ಗವಿಸಿದ್ದಪ್ಪ ಶಹಪೂರ, ರಮೇಶ ಪಾಟೀಲ್, ವಿರುಪಾಕ್ಷಗೌಡ್ರು, ರಾಮಣ್ಣ, ಸಿದ್ದಪ್ಪ, ಶೇಖರ ಇಂದರಗಿ ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!