ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಪ್ರಕರಣದ ಸಂಬಂಧ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿಯಾಗಿದ್ದು, ಪ್ರಕರಣದಲ್ಲಿ ಈಗಾಗಲೇ ಬಂಧಿತನಾಗಿರುವ ಸತ್ಯನಾರಾಯಣ ವರ್ಮಾ ಆ ಖಾತೆಗಳ ಮೇಲ್ವಿಚಾರಣೆ ವಹಿಸಿಕೊಂಡಿದ್ದ. ಮತ್ತು ಆ ಬ್ಯಾಂಕ್ ಖಾತೆಯಿಂದ ಶ್ರೀನಿವಾಸ್ ರಾವ್ ಹೆಸರಿಗೆ 10 ಕೋಟಿ ರೂ ವರ್ಗಾಯಿಸಿದ್ದ.
Advertisement
ಹಣವನ್ನು ವಿತ್ ಡ್ರಾ ಮಾಡಿಕೊಂಡಿದ್ದ ಆರೋಪಿ ಶ್ರೀನಿವಾಸ್ ರಾವ್, ಪ್ರಕರಣ ಬೆಳಕಿಗೆ ಬರುತ್ತಿದಂತೆ ತಲೆಮರೆಸಿಕೊಂಡಿದ್ದ. ಸದ್ಯ ಆತನನ್ನ ಬಂಧಿಸಲಾಗಿದ್ದು, 9 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಎಸ್ಐಟಿ ಅಧಿಕಾರಿಗಳು ಹಣ ಜಪ್ತಿ ಮಾಡುವ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿಸಿದ್ದಾರೆ.