ಮನೆ ಊಟ, ಹಾಸಿಗೆ, ಪುಸ್ತಕ ನೀಡುವಂತೆ ದರ್ಶನ್‌ ಮನವಿ: ನಾಳೆಗೆ ವಿಚಾರಣೆ ಮುಂದೂಡಿಕೆ

0
Spread the love

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರು ಮನೆ ಊಟಕ್ಕೆ ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿದ್ದ ಅರ್ಜಿಯನ್ನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ. ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

Advertisement

ದರ್ಶನ್ ಪರ ವಕೀಲರು ಮತ್ತು ಸರ್ಕಾರದ ಆಕ್ಷೇಪವಿರುವ ಎರಡು ಕಡೆಯ ಲಿಖಿತ ಪ್ರಾವಿಷನ್ ವರದಿಯನ್ನು ಕೋರ್ಟ್ ಸ್ವೀಕಾರ ಮಾಡಿದೆ. ಈ ವರದಿಯನ್ನು ಅಧ್ಯಯನ ಮಾಡಿ ನಾಳೆ ತೀರ್ಮಾನ ಮಾಡುವ ಸಾಧ್ಯತೆ ಇದೆ. ಇಂದು ದರ್ಶನ್ ಪರ ವಕೀಲರು ಮನೆ ಊಟಕ್ಕೆ ಅನುಮತಿ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಹೈಕೋರ್ಟ್ ನಾಳೆ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದೆ.


Spread the love

LEAVE A REPLY

Please enter your comment!
Please enter your name here