ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಪರಿಣಾಮವಾಗಿ ಇದೀಗ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೂಡ ಭೂಕುಸಿತದ ಆತಂಕ ಎದುರಾಗಿದ್ದು ಜಿಲ್ಲಾಡಳಿತ ಕಟ್ಟೆಚ್ಚರ ಘೋಷಿಸಿದೆ.
Advertisement
ಮುನ್ನೆಚ್ಚರಿಕೆ ಕ್ರಮವಾಗಿ, ಈ ಹಿಂದೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎಲ್ಲೆಲ್ಲಿ ಭೂಕುಸಿತ ಸಂಭವಿಸಿತ್ತೋ ಅಲ್ಲೆಲ್ಲ ಪರಿಶೀಲನೆ ನಡೆಸುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಭೆ ನಡೆಸಿದ್ದು ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಇದರ ಬೆನ್ನಲ್ಲೇ ಎಸ್ಪಿ ವಿಕ್ರಂ ಅಮ್ಟೆ ಸೇರಿದಂತೆ ಅಧಿಕಾರಿಗಳು ಚಾರ್ಮಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಾರ್ಮಾಡಿ ಘಾಟಿಯ ಅಲೇಖಾನ್ ಫಾಲ್ಸ್ ಬಳಿ 15 ದಿನಗಳ ಹಿಂದೆ ಭೂಕುಸಿತ ಸಂಭವಿಸಿತ್ತು. ಹೀಗಾಗಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಂಭಾವ್ಯ ಪರಿಸ್ಥಿತಿಗಳ ಬಗ್ಗೆ ಅವಲೋಕನ ನಡೆಸಿದ್ದಾರೆ.