ಪೋಲಿಸರ ಕಾರ್ಯಾಚರಣೆ: ಬೇರೆಡೆ ಗಮನ ಸೆಳೆದು ಚಿನ್ನಾಭರಣ ಕದಿಯುತ್ತಿದ್ದ ಗ್ಯಾಂಗ್ ಅರೆಸ್ಟ್

0
Spread the love

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಪೋಲಿಸರ ಕಾರ್ಯಾಚರಣೆ ನಡೆಸಿ ಬೇರೆಡೆ ಗಮನ ಸೆಳೆದು ಚಿನ್ನಾಭರಣ ಕದಿಯುತ್ತಿದ್ದ ಗ್ಯಾಂಗ್ ಅರೆಸ್ಟ್ ಮಾಡಿದ್ದಾರೆ. ಬುರ್ಕಾ ಧರಿಸಿ ಬಂದಿದ್ದ ಇಬ್ಬರು ಮಹಿಳೆಯರಿಂದ ಈ ಕೃತ್ಯ ಎಸಗಿದ್ದು, ಆರೋಪಿಗಳು ಚಿತ್ರದುರ್ಗದ ಭರಮಸಾಗರದ ಮೂಲದರಾಗಿದ್ದಾರೆ. ಜ್ಯೂವೆಲ್ಲರಿ ಶಾಪ್ ನಲ್ಲಿ 4.75ಲಕ್ಷ ಮೌಲ್ಯದ 78 ಗ್ರಾಂ ಚಿನ್ನದ ಸರ ಕಳ್ಳತನ ಮಾಡಿದ್ದರು.

Advertisement

ಕದ್ದ ಒಡವೆಗಳನ್ನ ಚಿತ್ರದುರ್ಗ ದ ಭರಮ ಸಾಗರದಲ್ಲಿ ಅಡಮಾನವಿಟ್ಟಿದ್ರು. ಇದನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ ದೇವರಗೆರೆ ಪಕ್ಕದ ಖಾಲಿ ಜಾಗದಲ್ಲಿ ಇಂಡಿಗೋ ಕಾರ್ ನಲ್ಲಿದ್ದ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಪೋಲಿಸರು ಬಂಧಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

LEAVE A REPLY

Please enter your comment!
Please enter your name here