HomeGadag Newsಚನ್ನಮ್ಮ ವಿಜಯೋತ್ಸವ ಆಚರಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಚನ್ನಮ್ಮ ವಿಜಯೋತ್ಸವ ಆಚರಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಶಿರಹಟ್ಟಿ
ವೀರರಾಣಿ ಕಿತ್ತೂರು ಚೆನ್ನಮ್ಮ 197ನೇ ವಿಜಯೋತ್ಸವ ಹಾಗೂ 242ನೇ ಜಯಂತ್ಯುತ್ಸವ ಆಚರಣೆ ಮಾಡದ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶುಕ್ರವಾರ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ವೀರಶೈವ ಪಂಚಮಸಾಲಿ ಸಮಾಜ ಹಾಗೂ ಕರವೇ ವತಿಯಿಂದ ಮನವಿ ಸಲ್ಲಿಸಲಾಯಿತು.
ತಾಲೂಕು ವೀರಶೈವ ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಕಬಾಡಿ, ಮುಖಂಡ ರವಿ ಹಳ್ಳಿ, ಕರವೇ ಅಧ್ಯಕ್ಷ ಬಸವರಾಜ ವಡವಿ ಮಾತನಾಡಿ, ಸ್ವಾತಂತ್ರ್ಯ ಸಂಗ್ರಮದ ಬೆಳ್ಳಿಚುಕ್ಕಿ, ಬ್ರಿಟಿಷರ ವಿರುದ್ಧ ದಂಗೆ ಎದ್ದ ದೇಶದ ಮೊದಲ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮನ ಜಯಂತ್ಯುತ್ಸವ ಹಾಗೂ ವಿಜಯೋತ್ಸವವನ್ನು ಸರಳವಾಗಿ ಆಚರಿಸಲು ಸರಕಾರದ ಸೂಚನೆ ಇದ್ದರೂ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ.
ಕ್ಷೇತ್ರ ಸಮನ್ವಯ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಲೋಕೋಪಯೋಗಿ ಇಲಾಖೆ, ಪಿಆರ್‌ಇಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಗಳು ಚನ್ನಮ್ಮ ಜಯಂತಿ ಆಚರಿಸಿಲ್ಲ. ಈ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮೂಲಕ ಆಗ್ರಹಿಸಿದ್ದಾರೆ.
ಶರಣಪ್ಪ ಹೊಸೂರ, ಮಂಜುನಾಥ ಬಳಿಗಾರ, ಶಿವಶಂಕರ ಕಲ್ಲಪ್ಪನವರ, ನಿಂಗರಾಜ ತುಳಿ, ಈಶ್ವರ ಕಲ್ಯಾಣಿ, ಮಲ್ಲೇಶ ವರವಿ, ಫಕ್ಕೀರಪ್ಪ ತುಳಿ, ಜಗದೀಶ ಬಳಿಗಾರ, ರಮೇಶ ಕಬಾಡರ, ಬಸವರಾಜ ಮೇಟಿ, ಬಸವರಾಜ ಬಳಿಗಾರ, ದೇವಪ್ಪ ಬಳಿಗಾರ, ಉಮೇಶ ಬಕ್ಕಸದ, ಬಸವರಾಜ ತುಳಿ, ಬಸವರಾಜ ಕಲ್ಯಾಣಿ ಉಪಸ್ಥಿತರಿದ್ದರು.
 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!