ಮಂಗಳೂರು: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಎನ್ನುವಲ್ಲಿ ತಡರಾತ್ರಿ ಸುರಿದ ಗಾಳಿಸಹಿತ ಭಾರೀ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್(17) ಮೃತ ದುರ್ಧೈವಿಯಾಗಿದ್ದು,
Advertisement
ಜೋಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಶೈಲೇಶ್ ಅತಿಥಿಯಾಗಿ ಬಂದಿದ್ದರು. ರಾತ್ರಿ ಮನೆಮಂದಿ ಊಟ ಮುಗಿಸಿ ಮಲಗಿದ್ದಾರೆ. ನಂತರ ಭಾರೀ ಗಾಳಿಸಹಿತ ಭಾರೀ ಮಳೆ ಸುರಿದಿದೆ. ಪಕ್ಕದ ಮನೆಯ ತಡೆಗೋಡೆ ಇವರ ಮನೆ ಮೇಲೆ ಕುಸಿದು ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣ ಕುಸಿದಿದೆ. ಮಣ್ಣಿನಡಿ ಸಿಲುಕಿ ಶೈಲೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.