ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಬೆಟಗೇರಿಯ ನರಸಾಪೂರ ರಸ್ತೆಯಲ್ಲಿರುವ ಶ್ರೀ ಅಮರೇಶ್ವರ ದೇವಸ್ಥಾನದ ಹತ್ತಿರದ ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇತ್ತೀಚೆಗೆ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿ ಡಾ. ಬಸವರಾಜ ಬಳ್ಳಾರಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
Advertisement
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಓಬಿಸಿ ಜಿಲ್ಲಾ ಅಧಿಕಾರಿ ರವಿ ಗುಂಜೀಕರ, ಪ್ರಾಚಾರ್ಯರಾದ ಎಮ್.ಜಿ. ಗವಾನಿ, ಪಿ.ಜಿ. ಪಾಟೀಲ್, ಜೈ ಹನುಮಾನ ಎಚ್.ಕೆ, ಡಾ. ಬಿ.ಬಿ. ಹೊಳಗುಂದಿ, ಡಾ. ವಿ.ಎ. ಹಿತ್ತಲಮನಿ, ಮಲ್ಲಿಕಾರ್ಜುನಗೌಡ ಪಾಟೀಲ್, ಅಶೋಕ ತುರಮುಂದಿ, ವಸತಿ ನಿಲಯದ ಮೇಲ್ವಿಚಾರಕಿ ಶೋಭಾ ಆಲೂರು, ಪತ್ರಕರ್ತ ಸುನೀಲಸಿಂಗ್ ಲದ್ದಿಗೇರಿ ಉಪಸ್ಥಿತರಿದ್ದರು.