ಬೀದರ್:- ಹೃದಯಾಘಾತದಿಂದ ಬೀದರ್ನ ಯೋಧ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಮೃತ ಯೋಧನನ್ನು ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಅನಿಲ್ಕುಮಾರ್ ಎನ್ನಲಾಗಿದೆ.
ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿಕ್ಕಿಂ ಗಡಿ ಭಾಗದ ಹಿಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಿಮಪಾತವಾಗಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಯೋಧನ ಪಾರ್ಥೀವ ಶರೀರ ಭಾನುವಾರ (ಜು.28) ರಂದು ಸ್ವಗ್ರಾಮಕ್ಕೆ ಬರುವ ಸಾಧ್ಯತೆ ಇದೆ. ಮೃತ ಯೋಧನಿಗೆ ತಂದೆ-ತಾಯಿ, ನಾಲ್ವರು ಸಹೋದರರು, ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅನಿಲ್ ಕುಮಾರ್ ಅವರು 2004ರಲ್ಲಿ ಭಾರತೀಯ ಸೇನೆಗೆ ಸೇರಿದ್ದರು. ಹವಾಲ್ದಾರರಾಗಿ ಸಿಕ್ಕಿಂ ಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.


