ಜೈಪುರದಿಂದ ಬೆಂಗಳೂರಿಗೆ ಆಮದಾಗುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸ ಮಿಶ್ರಿತವಾಗಿದೆ ಎಂದು ಆರೋಪಿಸಿದ್ದ ಪುನೀತ್ ಕೆರೆಹಳ್ಳಿ ನೇತೃತ್ವದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಸದಸ್ಯರು ಜುಲೈ 26ರಂದು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಮಾಂಸದ ಬಾಕ್ಸ್ಗಳನ್ನು ತಡೆದು ಪ್ರತಿಭಟಿಸಿದ್ದರು.
ಈ ಘಟನೆ ಸಂಬಂಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ ನಗರದ 5ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಠಾಣಾ ಪೊಲೀಸರು ಬಂಧಿಸಿದ್ದರು. ಸದ್ಯ ಪುನಿತ್ ಕೆರೆಹಳ್ಳಿಯಗೆ ಜಾಮೀನು ನೀಡಿರುವ ನ್ಯಾಯಾಲಯ ಪ್ರತಿ ತಿಂಗಳ ಮೊದಲ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು, ವಿದೇಶ ಪ್ರಯಾಣ ಮಾಡಬಾರದು ಎಂಬ ಷರತ್ತುಗಳನ್ನ ವಿಧಿಸಿದೆ.