ಸೀತಾರಾಮನ್ ಹೇಳಿರೋ ಮಾತು ಸತ್ಯಕ್ಕೆ ದೂರವಾದ ಮಾತು: ಡಾ.ಜಿ.ಪರಮೇಶ್ವರ್

0
Spread the love

ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಯಾವುದೇ ಸಂದರ್ಭದಲ್ಲಿ ಕೈಮೀರಿ ಹೋಗಿಲ್ಲ ಎಂದು  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಯಾವುದೇ ಸಂದರ್ಭದಲ್ಲಿ ಕೈಮೀರಿ ಹೋಗಿಲ್ಲ. ಸ್ವಾಭಾವಿಕವಾಗಿ ಕೆಲ ಘಟನೆಗಳು ನಡೆಯುತ್ತವೆ, ನಡೆದಿವೆ. ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಬಂದು ಕಾನೂನು ಸುವ್ಯವಸ್ಥೆ ಕೆಟ್ಟಿದೆ ಎಂದಿದ್ರು.

Advertisement

ಕೈಗಾರಿಕೆಗಳು ಬಂಡವಾಳ ಹೂಡಲು ಬರುತ್ತಿಲ್ಲ ಎಂದು ದೊಡ್ಡ ಅಪವಾದ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು. ಯಾವ ಕೈಗಾರಿಕೋದ್ಯಮಿಯೂ ‌ಇಲ್ಲಿಂದ ಹೊರಗೋಗ್ತೀನಿ ಎಂದಿಲ್ಲ. ಹೊರಗಿನವರು ಬಂದವರು ಯಾರೂ ಅಪವಾದ ಮಾಡಿಲ್ಲ. ಸೀತಾರಾಮನ್ ಹೇಳಿರೋ ಮಾತು ಸತ್ಯಕ್ಕೆ ದೂರವಾದ ಮಾತು. ಹೀಗಾಗಿ ನಾನು ಸ್ಪಷ್ಟೀಕರಣ ಕೊಡುತ್ತಿದ್ದೇನೆ ಎಂದರು.


Spread the love

LEAVE A REPLY

Please enter your comment!
Please enter your name here