ಮಂಡ್ಯ: ರಾತ್ರಿ ವೇಳೆ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಕಿರುಗಾವಲು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಎಂ.ದೊಡ್ಡಿಯ ಅಣ್ಣೂರು ಗ್ರಾಮದ ಶೇಖರ್, ಹಾಗೂ ಕ್ಯಾತಘಟ್ಟ ಗ್ರಾಮದ ಕೃಷ್ಣ, ವೆಂಕಟೇಶ್, ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ ಬರೋಬರಿ 47 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಸಿದ್ದಾರೆ. ರಾತ್ರಿ ವೇಳೆ ಮನೆಗಳ ಬೀಗ ಮುರಿದು ಕಳ್ಳತನ ಮಾಡ್ತಿದ್ದರು .
ಹಂದಿ ಸಾಕಾಣಿಕೆ ವ್ಯಾಪಾರ ಮಾಡಿಕೊಂಡು ಸುಮಾರು 40ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದರು. ಆರೋಪಿಗಳ ಪತ್ತೆಗೆ ಸಿಪಿಐ ಶ್ರೀಧರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಭರ್ಜರಿ ಕಾರ್ಯಾಚರಣೆ ಮೂಲಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 670 ಗ್ರಾಂ ಚಿನ್ನ, 170 ಗ್ರಾಂ ಬೆಳ್ಳಿ ಹಾಗೂ ಟಿವಿಎಸ್ ಬೈಕ್ ವಶಕ್ಕೆ ಪಡೆದು ಘಟನೆ ಸಂಭಂಧ ಪ್ರಕರಣ ದಾಖಲು ಮಾಡಲಾಗಿದೆ.