ಬೆಂಗಳೂರು: ಮಂತ್ರಿಗಳ ಬದಲಾವಣೆ, ಸಂಪುಟ ಪುನರ್ ರಚನೆ ಯಾವುದೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಭೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಂತ್ರಿಗಳ ಬದಲಾವಣೆ, ಸಂಪುಟ ಪುನರ್ ರಚನೆ ಯಾವುದೂ ಇಲ್ಲ.
ಒಟ್ಟಾಗಿ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆ ಹೆಸರು ತೆಗೆದುಕೊಂಡು ಬನ್ನಿ ಅಂತ ಹೇಳಿದ್ದಾರೆ. ಕ್ಯಾಬಿನೆಟ್ ಪುನರ್ ರಚನೆ, ಖಾತೆ ಬದಲಾವಣೆ ಯಾವುದೂ ಚರ್ಚೆ ನಮ್ಮ ಬಳಿ ಮಾಡಿಲ್ಲ .ಅ ಪ್ರಸ್ತಾಪವೇ ಸಭೆಯಲ್ಲಿ ಬಂದಿಲ್ಲ. ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ ಅಂತ ಹೇಳಿದ್ದಾರೆ ಅಷ್ಟೇ ಎಂದರು.
ಇನ್ನೂ ನಾವು ಕೂಡಾ ಅವರು ಎಲ್ಲೆಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೋ ಅಲ್ಲಿ ಹಿಂದಿನ ದಿನ ಅಲ್ಲಿಗೆ ಹೋಗಿ ಅನೇಕ ಪ್ರಶ್ನೆಗಳನ್ನ ನಾವು ಹಾಕುತ್ತಿದ್ದೇವೆ. ನಿಮ್ಮ ಕಾಲದಲ್ಲಿ ಏನಾಗಿತ್ತು ಅಂತ ಪ್ರಶ್ನೆ ಕೇಳುತ್ತಿದ್ದೇವೆ. ಮುಡಾ ಬಗ್ಗೆ ಏನು ಸತ್ಯಾಂಶ ಏನು ಅನ್ನೋದರ ಬಗ್ಗೆ ನಾವೂ ಕೂಡಾ ಹೇಳುತ್ತಿದ್ದೇವೆ ಅಂತ ತಿಳಿಸಿದರು.