ಕಾಂಗ್ರೆಸ್ ನಾಯಕತ್ವಕ್ಕೆ ಜವಾಬ್ದಾರಿ ಇದ್ದರೆ ಸಿದ್ದರಾಮಯ್ಯರ ರಾಜೀನಾಮೆ ಪಡೆಯಲಿ: ಯಡಿಯೂರಪ್ಪ

0
Spread the love

ಬೆಂಗಳೂರು: ಕೇಂದ್ರದ ಕಾಂಗ್ರೆಸ್ ನಾಯಕತ್ವಕ್ಕೆ ಜವಾಬ್ದಾರಿ ಇದ್ದರೆ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲಿ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಪಾದಯಾತ್ರೆ ಕಾರ್ಯಕ್ರಮಲ್ಲಿ ಮಾತನಾಡಿ,‌

Advertisement

ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ದಿನದಿನಕ್ಕೆ ಜನಸ್ತೋಮ ನಿರೀಕ್ಷೆ ಮೀರಿ ಜಾಸ್ತಿಯಾಗ್ತಿದೆ. ರಾಜ್ಯದಲ್ಲಿ ಉಸಿರು ಕಟ್ಟುವ ವಾತಾವರಣ ಇದೆ. ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ಕೊಡಬೇಕು. ಪಾದಯಾತ್ರೆ ಮೈಸೂರಿಗೆ ತಲುಪುವ ಒಳಗಾಗಿ ರಾಜೀನಾಮೆ ಕೊಡಬೇಕು ಎಂದರು.

ವಾಲ್ಮೀಕಿ ನಿಗಮದಂಥ ಬೃಹತ್ ಹಗರಣ ಹಿಂದೆಂದೂ ಆಗಿರಲಿಲ್ಲ.‌ ಇನ್ಸ್‌ಪೆಕ್ಟರ್‌ ವರ್ಗಾವಣೆಗೆ 30-40 ಲಕ್ಷ ತಗೋಳೋದು ನೋಡಿರಲಿಲ್ಲ. ಇದರಿಂದಾಗಿ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರೋದನ್ನ ನೀವು ನೋಡಿದ್ದೀರಿ. ಇದು ಅತ್ಯಂತ ಭ್ರಷ್ಟ ಸರಕಾರ ಎಂದು ಅವರು ಆಪಾದಿಸಿದರು.


Spread the love

LEAVE A REPLY

Please enter your comment!
Please enter your name here