ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಅರುಣ ಖದ್ದಿ (4) ಮೃತ ದುರ್ದೈವಿಯಾಗಿದ್ದು, ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಆಟವಾಡಲು ಹೋದ ಅರುಣ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.
Advertisement
ಭಾರಿ ಮಳೆ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಡಲಾಗಿತ್ತು. ಕಾಲುವೆಗೆ ಬಿದ್ದಾಗ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಾಗಿದೆ.