ಯಾರು ತಿಪ್ಪರಲಾಗ ಹೊಡೆದರೂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ: ಮಧು ಬಂಗಾರಪ್ಪ

0
Spread the love

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳಲು ಸಿ.ಟಿ.ರವಿ ಯಾರು? ನಾರಾಯಣಸ್ವಾಮಿ ಯಾರು? ಅವರೇನು ಕಾಂಗ್ರೆಸ್ ಪಕ್ಷದವರಾ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ  ಪ್ರಶ್ನಿಸಿದರು. ಶಿವಮೊಗ್ಗದಲ್ಲಿ  ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳಲು ಸಿ.ಟಿ.ರವಿ ಯಾರು? ನಾರಾಯಣಸ್ವಾಮಿ ಯಾರು? ಅವರೇನು ಕಾಂಗ್ರೆಸ್ ಪಕ್ಷದವರಾ ಎಂದು ಪ್ರಶ್ನಿಸಿದರು.

Advertisement

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಬೇಕು. ಯಾರು ತಿಪ್ಪರಲಾಗ ಹೊಡೆದರೂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಸುವ ಪ್ರಯತ್ನ ಸಂವಿಧಾನಕ್ಕೆ ವಿರುದ್ಧವಾದದ್ದು. ಹೊಟ್ಟೆ ಕಿಚ್ಚಿನಿಂದ ಸಿಎಂ ರಾಜೀನಾಮೆಗೆ ಬಿಜೆಪಿಯವರು ಒತ್ತಾಯಿ ಸುತ್ತಿದ್ದಾರೆ. ಅದಕ್ಕೆ ಜೆಡಿಎಸ್‌ನವರು ಸೇರಿದ್ದಾರೆ ಎಂದರು.

 


Spread the love

LEAVE A REPLY

Please enter your comment!
Please enter your name here