ರಾಜ್ಯದ ಮುಖ್ಯಮಂತ್ರಿಗಳ ಚಡ್ಡಿ ಕಪ್ಪಾಗಿದೆ: ಸಿದ್ದರಾಮಯ್ಯ ಅಣಕಿಸಿದ ಕುಮಾರಸ್ವಾಮಿ!

0
Spread the love

ಮೈಸೂರು:- ಸಿದ್ದರಾಮಯ್ಯನವರು ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಇಂದು ವಾಗ್ದಾಳಿ ನಡೆಸಿದರು.

Advertisement

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಪಾದಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ನನ್ನ ಬದುಕಿನಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಹೇಳಿದ್ದಾರೆ. ಆದರೆ, ಸಿದ್ದರಾಮಯ್ಯನವರು ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ.

ನೀವು ಹಿಂದುಳಿದ ವರ್ಗಗಳ ಮುಖ್ಯಮಂತ್ರಿ ಅಲ್ಲ, ನೀವು ಆರುವರೆ ಕೋಟಿ ಜನರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ. ಆರುವರೆ ಕೋಟಿಯ ಜನರ ರಕ್ಷಣೆ ಮಾಡುವ ಜವಾಬ್ದಾರಿ ನಿಮ್ಮದು. ಕಪ್ಪು ಚುಕ್ಕೆ ಇಲ್ಲ ಕಪ್ಪು ಚುಕ್ಕೆ ಇಲ್ಲ ಅಂತಾರೆ. ಆದರೆ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾನೂನು ಬಾಹಿರವಾಗಿ ಸೈಟ್​ ಪಡೆದ ಬಗ್ಗೆ ನಾವು ಪ್ರಶ್ನೆ ಮಾಡ್ತಿದ್ದೇವೆ. ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಎಂದಿದ್ದಾರೆ. ಆದ್ರೆ, ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ಪ್ರಶ್ನೆ ಮಾಡ್ತಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೊಟ್ಟಿರುವುದು ಸರ್ಕಾರದ ಭೂಮಿ. ಸಿಎಂ ಮೂಗಿನ ನೇರವಾಗಿ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಈಗಲೂ ನಾನು 14 ಸೈಟ್​ ವಾಪಸ್​ ಕೊಡಲು ಸಿದ್ಧ ಎಂದಿದ್ದಾರಂತೆ. ಸೈಟ್ ವಾಪಸ್​ ಕೊಟ್ಟರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವಾ? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಮಾಜಿ ಸಿಎಂ, “ನನ್ನ ಅಣ್ಣನ ಮಗನನ್ನು ನಾನು ಜೈಲಿಗೆ ಕಳುಹಿಸಿದ್ದೀನಿ ಅಂದಿದ್ದೀರಿ ಶಿವಕುಮಾರ್. ಮಿಸ್ಟರ್ ಶಿವಕುಮಾರ್, ನಾನು ಚಾಮುಂಡೇಶ್ವರಿ ಸನ್ನಿದಾನದಲ್ಲಿ ನಿಂತು ಮಾತಾಡ್ತಿದ್ದೇನೆ. ಕಾಫಿ ಡೇ ಸಿದ್ದಾರ್ಥ ಸಾವಿಗೆ ಕಾರಣ ಯಾರು ಅಂತಾ ಹೇಳ್ತೀರಾ?” ಎಂದು ಪ್ರಶ್ನಿಸಿದರು.


Spread the love

LEAVE A REPLY

Please enter your comment!
Please enter your name here