ವಯನಾಡ್ ಸಂತ್ರಸ್ತರಿಗೆ 8 ಟ್ರಕ್ಗಳಲ್ಲಿ ಅಗತ್ಯ ವಸ್ತುಗಳ ರವಾನೆ: ಡಿಕೆ ಶಿವಕುಮಾರ್, ರಾಮಲಿಂಗಾರೆಡ್ಡಿ ಚಾಲನೆ!

0
Spread the love

ಬೆಂಗಳೂರು:- ಭೂಕುಸಿತದಿಂದ ಎಲ್ಲವನ್ನೂ ಕಳೆದುಕೊಂಡಿರುವ ವಯನಾಡ್ ಸಂತ್ರಸ್ತರಿಗೆ 8 ಟ್ರಕ್​ಗಳಲ್ಲಿ ಅಗತ್ಯ ವಸ್ತುಗಳ ರವಾನೆಗೆ ಇಂದು DCM ಡಿಕೆ ಶಿವಕುಮಾರ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

Advertisement

ಬೆಂಗಳೂರಿನ ಬಿಟಿಎಂ ವಿಧಾನಸಭಾ ಶಾಸಕರ ಕಛೇರಿಯಲ್ಲಿ ವಯನಾಡು ಮಳೆ ಪ್ರವಾಹದಲ್ಲಿ ಸಂತ್ರಸ್ತರಿಗೆ ಅಗತ್ಯವಾಗಿರುವ ದಿನಸಿ, ಅಗತ್ಯ ವಸ್ತುಗಳನ್ನು 8 ಟ್ರಕ್​ಗಳಲ್ಲಿ ರವಾನೆ ಕಾರ್ಯಕ್ರಮ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಶಾಸಕಿ ಸೌಮ್ಯರೆಡ್ಡಿ ಹಸಿರು ನಿಶಾನೆ ತೋರುವ ಮೂಲಕ ಬೀಳ್ಕೊಡುಗೆ ನೀಡಿದರು.

ಸ್ಥಳೀಯ ಕಾಂಗ್ರೆಸ್ ಮುಖಂಡರು, ಮಾಜಿ ಪಾಲಿಕೆ ಸದಸ್ಯರುಗಳು ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಪ್ರಕೃತಿ ಮುಂದೆ ಮಾನವರ ಆಟ ನಡೆಯುವುದಿಲ್ಲ. ಮಳೆ ಪ್ರವಾಹ ಸಂಕಷ್ಟದಲ್ಲಿ ಸಾವಿರಾರು ಜನರು ಸಂಕಷ್ಟದಲ್ಲಿ ಇದ್ದಾರೆ. ಸಹಾಯ, ಸಹಕಾರ ನೀಡುವುದು ಪ್ರತಿಯೊಬ್ಬರ ಮಾನವೀಯತೆ ಧರ್ಮ. ರಾಜ್ಯ ಸರ್ಕಾರದಿಂದ ಕೇರಳ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡಲು ಸರ್ಕಾರ ಸಹಾಯ ಮಾಡುತ್ತಿದೆ. ಸಚಿವ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ 8 ಟ್ರಕ್​ಗಳಲ್ಲಿ ಅಗತ್ಯ ಇರುವ ವಸ್ತುಗಳು ರವಾನೆಯಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here