ಕೊಪ್ಪಳ: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19 ನಂಬರ್ ಗೇಟ್ನ ಚೈನ್ ಲಿಂಕ್ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ. ಇದರಿಂದಾಗಿ 1 ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಜಲಾಶಯದಿಂದ ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಸದ್ಯ 105 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್ಗಳಿಂದ ಸುಮಾರು 75 ಸಾವಿರ ಕ್ಯುಸೆಕ್ ನೀರನ್ನ ಹೊರಬಿಡಲಾಗುತ್ತಿದೆ.
ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ರೆ ಮಾತ್ರವೇ ಗೇಟ್ಗೆ ಏನಾಗಿದೆ ಎಂಬುದನ್ನ ನೋಡೋದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನೀರಾವರಿ ಇಲಾಖೆಯ ಉನ್ನತ ಅಧಿಕಾರಿಗಳು ಈಗಾಗಲೇ ಬೆಂಗಳೂರಿನಿಂದ ಹೊರಟಿದ್ದು, ನೀರಿನ ಹೊರಹರಿವಿನ ಪ್ರಮಾಣವನ್ನ 1 ರಿಂದ 2 ಲಕ್ಷ ಕ್ಯುಸೆಕ್ಗೆ ಏರಿಸಬೇಕು.
ನೀರು ಕಡಿಮೆಯಾದ್ರೆ ಬಳಿಕ ತುಂಡಾದ ಚೈನ್ಲಿಂಕ್ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3-4 ದಿನವಾದ್ರೂ ಬೇಕು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.