ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಎಂಬಿ ಪಾಟೀಲ್

0
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಬಗ್ಗೆ ಬೆಂಗಳೂರಿನಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ನಿಶ್ಚಿತವಾಗಿ ಕಾನೂನು ಹೋರಾಟದಲ್ಲಿ ನಾವು ಜಯ ಗಳಿಸುತ್ತೇವೆ ಎಂದಿದ್ದಾರೆ. ನಾವು ಕಾನೂನು ಹೋರಾಟದಲ್ಲಿ ಜಯಗಳಿಸಲಿದ್ದೇವೆ. ಇದರ ಪರಿಣಾಮ ಕೇಂದ್ರ ಸರ್ಕಾರ ಕೂಡ ಪಶ್ಚಾತ್ತಾಪ ಪಡಲಿದೆ.

Advertisement

ರಾಜ್ಯಪಾಲರು ಕೇಂದ್ರದ ಕೈಗೊಂಬೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ. ನಾವೆಲ್ಲ ಸಚಿವರು, ಶಾಸಕರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲೇ ನಾವು 136 ಸೀಟುಗಳನ್ನು ಗೆದ್ದಿದ್ದೇವೆ. ಅರಸು ಬಳಿಕ 5 ವರ್ಷ ಪೂರೈಸಿದ ಹಿಂದುಳಿದ ವರ್ಗದ ನಾಯಕ ಎಂದು ಎಂಬಿ ಪಾಟೀಲ್ ಹೇಳಿದರು.


Spread the love

LEAVE A REPLY

Please enter your comment!
Please enter your name here