ವಿಜಯಪುರ: ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯಕ್ಕೆ ತೆರಳಿದಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಗೆ ಗಂಗಾಪೂಜೆ ನೆರವೇರಿಸಿದರು.
ಈ ಬಳಿಕ ಸಂಪ್ರದಾಯದಂತೆ ಆಲಮಟ್ಟಿ ಜಲಾಯಶಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಈ ವೇಳೆಯಲ್ಲಿ ಸಚಿವ ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್.ಬಿ ತಿಮ್ಮಾಪುರ, ಹೆಚ್.ವೈ ಮೇಟಿ, ಕಾಶಪ್ಪನವರು ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು.
ರಾಜ್ಯದಲ್ಲಿಮುಂಗಾರು ಒಳನಾಡು ಮೀನುಗಾರಿಕೆಗೆ ಚೈತನ್ಯ ನೀಡಿದೆ. ಕಳೆದ ವರ್ಷದ ಬರದಿಂದ ಬರಿದಾಗಿದ್ದ ಕೆರೆಗಳು ನೀರಿನಿಂದ ತುಂಬಿವೆ. ಈ ಬಾರಿ 60 ಕೋಟಿ ಮೀನು ಉತ್ಪಾದಿಸುವ ಗುರಿಯನ್ನು ಇಲಾಖೆ ಹೊಂದಿದೆ. ಈ ನಿಟ್ಟಿನಲ್ಲಿಈಗಾಗಲೇ ಮೀನು ಮರಿಗಳ ಉತ್ಪಾದನೆಗೂ ಒತ್ತು ನೀಡಲಾಗಿದೆ.