ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ CM ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

0
Spread the love

ವಿಜಯಪುರ: ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯಕ್ಕೆ ತೆರಳಿದಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಗೆ ಗಂಗಾಪೂಜೆ ನೆರವೇರಿಸಿದರು.

Advertisement

ಈ ಬಳಿಕ ಸಂಪ್ರದಾಯದಂತೆ ಆಲಮಟ್ಟಿ ಜಲಾಯಶಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಈ ವೇಳೆಯಲ್ಲಿ ಸಚಿವ ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್.ಬಿ ತಿಮ್ಮಾಪುರ, ಹೆಚ್.ವೈ ಮೇಟಿ, ಕಾಶಪ್ಪನವರು ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು.

ರಾಜ್ಯದಲ್ಲಿಮುಂಗಾರು ಒಳನಾಡು ಮೀನುಗಾರಿಕೆಗೆ ಚೈತನ್ಯ ನೀಡಿದೆ. ಕಳೆದ ವರ್ಷದ ಬರದಿಂದ ಬರಿದಾಗಿದ್ದ ಕೆರೆಗಳು ನೀರಿನಿಂದ ತುಂಬಿವೆ. ಈ ಬಾರಿ 60 ಕೋಟಿ ಮೀನು ಉತ್ಪಾದಿಸುವ ಗುರಿಯನ್ನು ಇಲಾಖೆ ಹೊಂದಿದೆ. ಈ ನಿಟ್ಟಿನಲ್ಲಿಈಗಾಗಲೇ ಮೀನು ಮರಿಗಳ ಉತ್ಪಾದನೆಗೂ ಒತ್ತು ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here